Webdunia - Bharat's app for daily news and videos

Install App

ರಾಹುಲ್ ಗಾಂಧಿಯನ್ನು ಕತ್ತೆ ಎನ್ನದೇ ಕುದುರೆ ಎನ್ನಲೇ?: ರಾಯ್ ಪ್ರಶ್ನೆ

Webdunia
ಗುರುವಾರ, 20 ಅಕ್ಟೋಬರ್ 2016 (11:52 IST)
ರಾಹುಲ್ ಗಾಂಧಿಯನ್ನು ಕತ್ತೆ ಎನ್ನದೆ ಕುದುರೆ ಎನ್ನಲಾಗುತ್ತದೆಯೇ? ಎಂದು ರಾಹುಲ್ ಗಾಂಧಿಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಅಮಾನತಾಗಿರುವ ಕಾಂಗ್ರೆಸ್ ಬಂಡಾಯ ಶಾಸಕ ಪ್ರಶ್ನಿಸಿದ್ದಾರೆ. 

ತಮ್ಮನ್ನು ಅಮಾನತುಗೊಳಿಸಿರುವ ಕೆಡಿಸಿಕೊಳ್ಳದ ಶಾಸಕ ಆರ್.ಕೆ. ರಾಯ್ ರಾಹುಲ್ ಗಾಂಧಿ ವಿರುದ್ಧ ಮತ್ತೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು ಪಕ್ಷದಿಂದ ಕಿತ್ತೊಗೆದರೇನಾಯಿತು, ಕತ್ತೆಯನ್ನು ನಾನು ಕುದುರೆ ಎನ್ನಲಾರೆ ಎಂದು ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ. 
 
ಛತ್ತೀಸಗಢದ ಗುಂಡರ್‌ದೇಹಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ರಾಯ್ ಕಳೆದ ಕೆಲ ದಿನಗಳಿಂದ ರಾಹುಲ್ ವಿರುದ್ಧ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದರು. ಹೀಗಾಗಿ ಹೈ ಕಮಾಂಡ್ ಕಣ್ಣಿಗೆ ಗುರಿಯಾಗಿದ್ದರು. 
 
ಮಂಗಳವಾರ ಛತ್ತೀಸ್‌ಗಢದಲ್ಲಿ ನಡೆದ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆಯಲ್ಲಿ ಆರ್.ಕೆ. ರಾಯ್ ರಾಹುಲ್ ಗಾಂಧಿಯವರನ್ನು ಬಹಿರಂಗವಾಗಿಯೇ ಕತ್ತೆ ಎಂದು ಜರಿದಿದ್ದರು. ಈ ಹಿನ್ನೆಲೆಯಲ್ಲಿ ರಾಯ್ ಅವರನ್ನು ಪಕ್ಷದಿಂದ ಅಮಾನತುಗೊಂಡಿದ್ದರು. 
 
ತಮ್ಮನ್ನು ಅಮಾನತುಗೊಳಿಸಿರುವ ನಿರ್ಧಾರವನ್ನು ಸ್ವಾಗತಿಸಿರುವ ಶಾಸಕ, ರಾಹುಲ್ ವಿರುದ್ಧ ಮಾತನಾಡಿದರೆ ನನ್ನನ್ನು ಪಕ್ಷದಿಂದ ಹೊರಹಾಕುತ್ತಾರೆಂದು ಮೊದಲೇ ಹೇಳಿದ್ದೆ. ಹಾಗೆಂದು, ಕತ್ತೆಯನ್ನು ಕುದುರೆ ಎಂದು ಕರೆಯಲಾಗದು, ಕತ್ತೆ ಕತ್ತೆಯೇ ಎಂದಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments