Webdunia - Bharat's app for daily news and videos

Install App

ರಾಜ್ಯಸಭೆಯಲ್ಲಿ ಮಾತನಾಡಲು ಹೊರಟ ಸಚಿನ್ ಬಾಯಿ ಮುಚ್ಚಿಸಿದ ಕಾಂಗ್ರೆಸ್ ಸಂಸದರು!

Webdunia
ಶುಕ್ರವಾರ, 22 ಡಿಸೆಂಬರ್ 2017 (09:54 IST)
ನವದೆಹಲಿ: ಎಲ್ಲಾ ಸರಿ ಹೋಗಿದ್ದರೆ ಸಚಿನ್ ತೆಂಡುಲ್ಕರ್ ನಿನ್ನೆ ಪ್ರಥಮ ಬಾರಿಗೆ ರಾಜ್ಯ ಸಭೆಯಲ್ಲಿ ಸಂಸದರಾಗಿ ಮಾತನಾಡಬೇಕಿತ್ತು. ಆದರೆ ಕಾಂಗ್ರೆಸ್ ಸದಸ್ಯರ ಗದ್ದಲದಿಂದಾಗಿ ಮೊದಲ ಪ್ರಯತ್ನದಲ್ಲೇ ಡಕ್ ಔಟ್ ಆಗಿದ್ದಾರೆ!
 

ನಿನ್ನೆ ಮಧ್ಯಾಹ್ನದ ಅವಧಿಯಲ್ಲಿ ಮೇಲ್ಮನೆಯಲ್ಲಿ ಸಚಿನ್ ತೆಂಡುಲ್ಕರ್ ದೇಶದ ಕ್ರೀಡಾ ಕ್ಷೇತ್ರದ ಸಮಸ್ಯೆಗಳ ಕುರಿತು ಮಾತನಾಡಲು ಅವಕಾಶ ಕೋರಿದ್ದರು. ಅದರಂತೆ ಅವರು ಮಾತನಾಡಲು ಎದ್ದು ನಿಂತಾಗ ವಿಪಕ್ಷ ಕಾಂಗ್ರೆಸ್ ಮನಮೋಹನ್ ಸಿಂಗ್ ಪಾಕ್ ಅಧಿಕಾರಿಗಳೊಂದಿಗೆ ಮಾತನಾಡಿದ್ದರು ಎಂದು ಪ್ರಧಾನಿ ಮೋದಿ ಆರೋಪ ಮಾಡಿದ್ದಕ್ಕೆ ಕ್ಷಮೆ ಯಾಚಿಸಬೇಕೆಂದು ಗದ್ದಲವೆಬ್ಬಿಸಿದರು.

ಇದರಿಂದಾಗಿ ಸಚಿನ್ 10 ನಿಮಿಷ ಮೌನವಾಗಿ ನಿಲ್ಲಬೇಕಾಯಿತು. ಅತ್ತ ಸಭಾಪತಿ ವೆಂಕಯ್ಯನಾಯ್ಡು ‘ನೋಡಿ ಮಾತನಾಡಲು ನಿಂತವರು ಭಾರತ ರತ್ನ ಪಡೆದ ಹೆಮ್ಮೆಯ ಕ್ರೀಡಾಳು ಕೂಡಾ. ದಯವಿಟ್ಟು ಅವರಿಗೆ ಮಾತನಾಡಲು ಅವಕಾಶ ಕೊಡಿ. ಅವಮಾನ ಮಾಡಬೇಡಿ’ ಎಂದು ಮನವಿ ಮಾಡಿದರೂ ಕಾಂಗ್ರೆಸ್ ಸದಸ್ಯರು ಗದ್ದಲ ಮುಂದುವರಿಸಿದರು. ಇದರಿಂದಾಗಿ ಸಭಾಪತಿ ಕಲಾಪವನ್ನು ಮುಂದೂಡಿದರು.

ಹೀಗಾಗಿ ನಿನ್ನೆ ಸಚಿನ್ ಮಾತನಾಡುವ ಅವಕಾಶ ಒದಗಿಬರಲೇ ಇಲ್ಲ. ಈ ಬಗ್ಗೆ ಸಂಸದೆ ಜಯಾ ಬಚ್ಚನ್ ಸೇರಿದಂತೆ ಹಲವರು ಗದ್ದಲವೆಬ್ಬಿಸಿದ ಸದಸ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತದ ಹೆಸರನ್ನು ವಿಶ್ವದಾದ್ಯಂತ  ಉತ್ತುಂಗಕ್ಕೇರಿಸಿದ ವ್ಯಕ್ತಿಯೊಬ್ಬ ಮಾತನಾಡಲು ನಿಂತರೆ ಈ ರೀತಿ ಅವಮಾನ ಮಾಡುವುದು ಸರಿಯಲ್ಲ ಎಂದು ಜಯಾ ಬಚ್ಚನ್ ಆಕ್ರೋಶ ವ್ಯಕ್ತಪಡಿಸಿದರು. ಏನೇ ಆದರೂ ಕ್ರಿಕೆಟ್ ಮೈದಾನದ ಹೊರತಾಗಿ ಸಚಿನ್ ಮೊದಲ ಇನಿಂಗ್ಸ್ ಶೂನ್ಯ ಸಂಪಾದನೆಯಾಗಿದ್ದಂತೂ ನಿಜ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments