Webdunia - Bharat's app for daily news and videos

Install App

ಬಿಜೆಪಿ ಉತ್ತರ ಪ್ರದೇಶದ ಭವಿಷ್ಯ

Webdunia
ಮಂಗಳವಾರ, 14 ಜೂನ್ 2016 (17:06 IST)
ಉತ್ತರ ಪ್ರದೇಶದಲ್ಲಿ ಅಧಿಕಾರವನ್ನು ಮರಳಿಗಳಿಸಲು ಕಾಂಗ್ರೆಸ್ ನಡೆಸುತ್ತಿರುವ ಪ್ರಯತ್ನ ವ್ಯರ್ಥ, ಈ ರಾಜ್ಯದ ಭವಿಷ್ಯ ಬಿಜೆಪಿ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. 

ಗುಲಾಂ ನಬಿ ಆಜಾದ್ ಅವರಿಗೆ ಉತ್ತರ ಪ್ರದೇಶ್ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಿಸಿರುವುದಕ್ಕೆ ಸಂಬಂಧಿಸಿದಂತೆ ವರದಿಗಾರರು ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಿದ್ದ ಅವರು ಉತ್ತರಪ್ರದೇಶದಲ್ಲಿ ಪ್ರಸ್ತುತವಲ್ಲದವರ ಬಗ್ಗೆ ಏಕೆ ಮಾತನ್ನಾಡಬೇಕು? ಎಂದು ಮರುಪ್ರಶ್ನೆ ಹಾಕಿದ್ದಾರೆ. 
 
ಅಲಹಾಬಾದ್‌ನಲ್ಲಿ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಿದ ಬಿಜೆಪಿ ಕೆಲವು ರಾಜಕೀಯ ನಿರ್ಣಯಗಳನ್ನು ತೆಗೆದುಕೊಂಡಿತು. ಈ ಸಂದರ್ಭದಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಎಡ ಪಕ್ಷದ ಮೇಲೆ ಆರೋಪದ ಸುರಿಮಳೆಗೈದ ಬಿಜೆಪಿ ಇವೆರಡು ಪಕ್ಷಗಳು ಕೇವಲ ಕ್ಷುಲ್ಲಕ ವಿಷಯಗಳಲ್ಲಿ ಮುಳುಗಿರುತ್ತವೆ ಹೊರತು ಅದರಿಂದ ಹೊರಬರುವುದಿಲ್ಲ. ಇದು ದೇಶದ ಪ್ರಗತಿಗೆ ಮಾರಕವಾಗಿದೆ ಎಂದು ಕಿಡಿಕಾರಿದೆ.
 
"ಬಿಜೆಪಿ ಭಾರತದ ವರ್ತಮಾನ ಪಕ್ಷ- ಇದು ಭಾರತದ ಭವಿಷ್ಯದ ಪಕ್ಷವಾಗಲಿದೆ"- ಎಂಬ ಪ್ರತ್ಯೇಕ ನಿರ್ಣಯವನ್ನು ಸಹ ಸಭೆಯಲ್ಲಿ  ಕೈಗೊಳ್ಳಲಾಯಿತು.
 
ಇತ್ತೀಚಿನ ಚುನಾವಣೆಗಳಲ್ಲಿ ಪಕ್ಷದ ಸಾಧನೆ "ಅಭೂತಪೂರ್ವ ಮತ್ತು ಅಗಾಧ" ಎಂದು ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments