Select Your Language

Notifications

webdunia
webdunia
webdunia
webdunia

ಮೋದಿ ಸರಕಾರದ ಎರಡು ವರ್ಷದ ದುರಾಡಳಿತ: ಕಾಂಗ್ರೆಸ್‌ನಿಂದ ಕಿರುಚಿತ್ರ, ಪುಸ್ತಕ ಬಿಡುಗಡೆ

ಮೋದಿ ಸರಕಾರದ ಎರಡು ವರ್ಷದ ದುರಾಡಳಿತ: ಕಾಂಗ್ರೆಸ್‌ನಿಂದ ಕಿರುಚಿತ್ರ, ಪುಸ್ತಕ ಬಿಡುಗಡೆ
ನವದೆಹಲಿ , ಗುರುವಾರ, 26 ಮೇ 2016 (11:58 IST)
ಪ್ರಧಾನಿ ನರೇಂದ್ರ ಮೋದಿ ಸರಕಾರದ ಎರಡು ವರ್ಷದ ದುರಾಡಳಿತದ ಮೇಲೆ ಬೆಳಕು ಚೆಲ್ಲಲು ಮಾಧ್ಯಮ ಸಂವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
 
ಅಭಿವೃದ್ಧಿ ನಿಂತು ಹೋಗಿದೆ ದೇಶದ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ ಎನ್ನುವ ಶೀರ್ಷಿಕೆಯಡಿ ಮಾಧ್ಯಮ ಸಂವಾದ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. 
 
ಕಳೆದ ಲೋಕಸಭೆ ಚುನಾವಣೆಗೆ ಮುಂಚೆ ಮೋದಿ ನೀಡಿದ ಭರವಸೆಗಳು, ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸರಕಾರ ವೈಫಲ್ಯಗಳ ಬಗ್ಗೆ ಪುಸ್ತಕವೊಂದನ್ನು ಹೊರತರಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. 
 
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ದೇಶದ 30 ನಗರಗಳು ಮತ್ತು ಪಟ್ಟಣಗಳಲ್ಲಿ ಸರಣಿ ಪತ್ರಿಕಾಗೋಷ್ಠಿಗಳನ್ನು ನಡೆಸಲಿದ್ದಾರೆ ಎನ್ನಲಾಗಿದೆ.
 
ಕೇಂದ್ರ ಸರಕಾರದ ಎರಡು ವರ್ಷದ ಸಂಭ್ರಮಾಚರಣೆಗೆ ತಿರುಗೇಟು ನೀಡಲು ಕಾಂಗ್ರೆಸ್ ಪಕ್ಷ ರಣತಂತ್ರ ರೂಪಿಸಿದೆ. ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಮತ್ತು ಗುಲಾಮ್ ನಬಿ ಆಜಾದ್ ಸುದ್ದಿಗೋಷ್ಠಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರರು ತಿಳಿಸಿದ್ದಾರೆ.  

 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಉತ್ತರಪ್ರದೇಶ ಸಿಎಂ ಅಭ್ಯರ್ಥಿಯ ಘೋಷಣೆ ಸದ್ಯಕ್ಕಿಲ್ಲ: ಅಮಿತ್ ಶಾ