Webdunia - Bharat's app for daily news and videos

Install App

ಮೋದಿ ಸರಕಾರದ ಎರಡು ವರ್ಷದ ದುರಾಡಳಿತ: ಕಾಂಗ್ರೆಸ್‌ನಿಂದ ಕಿರುಚಿತ್ರ, ಪುಸ್ತಕ ಬಿಡುಗಡೆ

Webdunia
ಗುರುವಾರ, 26 ಮೇ 2016 (11:58 IST)
ಪ್ರಧಾನಿ ನರೇಂದ್ರ ಮೋದಿ ಸರಕಾರದ ಎರಡು ವರ್ಷದ ದುರಾಡಳಿತದ ಮೇಲೆ ಬೆಳಕು ಚೆಲ್ಲಲು ಮಾಧ್ಯಮ ಸಂವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
 
ಅಭಿವೃದ್ಧಿ ನಿಂತು ಹೋಗಿದೆ ದೇಶದ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ ಎನ್ನುವ ಶೀರ್ಷಿಕೆಯಡಿ ಮಾಧ್ಯಮ ಸಂವಾದ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. 
 
ಕಳೆದ ಲೋಕಸಭೆ ಚುನಾವಣೆಗೆ ಮುಂಚೆ ಮೋದಿ ನೀಡಿದ ಭರವಸೆಗಳು, ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸರಕಾರ ವೈಫಲ್ಯಗಳ ಬಗ್ಗೆ ಪುಸ್ತಕವೊಂದನ್ನು ಹೊರತರಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. 
 
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ದೇಶದ 30 ನಗರಗಳು ಮತ್ತು ಪಟ್ಟಣಗಳಲ್ಲಿ ಸರಣಿ ಪತ್ರಿಕಾಗೋಷ್ಠಿಗಳನ್ನು ನಡೆಸಲಿದ್ದಾರೆ ಎನ್ನಲಾಗಿದೆ.
 
ಕೇಂದ್ರ ಸರಕಾರದ ಎರಡು ವರ್ಷದ ಸಂಭ್ರಮಾಚರಣೆಗೆ ತಿರುಗೇಟು ನೀಡಲು ಕಾಂಗ್ರೆಸ್ ಪಕ್ಷ ರಣತಂತ್ರ ರೂಪಿಸಿದೆ. ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಮತ್ತು ಗುಲಾಮ್ ನಬಿ ಆಜಾದ್ ಸುದ್ದಿಗೋಷ್ಠಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರರು ತಿಳಿಸಿದ್ದಾರೆ.  

 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments