Webdunia - Bharat's app for daily news and videos

Install App

ಡಾ ಮನಮೋಹನ್ ಸಿಂಗ್ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಈ ಬೇಡಿಕೆ ಮುಂದಿಟ್ಟಕಾಂಗ್ರೆಸ್

Krishnaveni K
ಶನಿವಾರ, 28 ಡಿಸೆಂಬರ್ 2024 (08:35 IST)
Photo Credit: X
ನವದೆಹಲಿ: ಮೊನ್ನೆಯಷ್ಟೇ ನಮ್ಮನ್ನಗಲಿದ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅಂತ್ಯ ಸಂಸ್ಕಾರ ಇಂದು ನೆರವೇರಲಿದೆ. ಮನಮೋಹನ್ ಸಿಂಗ್ ಅಂತ್ಯಸಂಸ್ಕಾರಕ್ಕೆ ಮೊದಲು ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರಕ್ಕೆ ಬೇಡಿಕೆಯೊಂದನ್ನು ಇಟ್ಟಿದೆ.

ಮನಮೋಹನ್ ಸಿಂಗ್ ಅಂತ್ಯ ಸಂಸ್ಕಾರಕ್ಕೆ ಮೊದಲು ಇಂದು ಎಐಸಿಸಿ ಕಚೇರಿಯಲ್ಲಿ ಅವರ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಇಲ್ಲಿಯೂ
ಕಾಂಗ್ರೆಸ್ ನಾಯಕರು ಮನಮೋಹನ್ ಸಿಂಗ್ ಗೆ ಗೌರವ ನಮನ ಸಲ್ಲಿಸಲಿದ್ದಾರೆ.

ಅವರ ಮಗಳು ಅಮೆರಿಕಾದಿಂದ ಬರಬೇಕಿದ್ದರಿಂದ ಅಂತ್ಯಸಂಸ್ಕಾರವನ್ನು ಇಂದಿಗೆ ಮುಂದೂಡಲಾಗಿತ್ತು. ಇಂದು ಸಕಲ ಸರ್ಕಾರೀ ಗೌರವಗಳೊಂದಿಗೆ ಮಾಜಿ ಪ್ರಧಾನಿಗೆ ಅಂತಿಮ ವಿಧಿ ವಿಧಾನಗಳು ನೆರವೇರಲಿದೆ. ಅವರ ಅಂತ್ಯಕ್ರಿಯೆ ಜಾಗ ಮತ್ತು ಸ್ಮಾರಕ ಕುರಿತಂತೆ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಮುಂದಿಟ್ಟಿದೆ ಎನ್ನಲಾಗಿದೆ.

ಮಾಜಿ ಪ್ರಧಾನಿಗಳಾದ ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಅಟಲ್ ಬಿಹಾರಿ ವಾಜಪೇಯಿಗೆ ದೆಹಲಿಯಲ್ಲೇ ಗೌರವಯುತವಾಗಿ ಅಂತ್ಯಸಂಸ್ಕಾರ ನಡೆಸಿ ಸ್ಮಾರಕವನ್ನೂ ನೆರವೇರಿಸಲಾಗಿದೆ. ಅದೇ ರೀತಿ ಮನಮೋಹನ್ ಸಿಂಗ್ ಗೂ ದೆಹಲಿಯಲ್ಲಿ ಅಂತಿಮ ವಿಧಿ ವಿಧಾನಗಳು ನಡೆಯಲಿವೆ. ಅಟಲ್ ಬಿಹಾರಿ ವಾಜಪೇಯಿಗೆ ಮಾಡಿದಂತೆ ಮನಮೋಹನ್ ಸಿಂಗ್ ಗೂ ಸ್ಮಾರಕ ನಿರ್ಮಿಸಬೇಕೆಂದು ಕಾಂಗ್ರೆಸ್ ಬೇಡಿಕೆ ಮುಂದಿಟ್ಟಿದೆ ಎನ್ನಲಾಗಿದೆ. ಇದಕ್ಕೆ ಕೇಂದ್ರೂ ಸಮ್ಮತಿಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments