Webdunia - Bharat's app for daily news and videos

Install App

ಉತ್ತರಾಖಂಡ ವಿಶ್ವಾಸಮತ ಪರೀಕ್ಷೆಯಲ್ಲಿ ರಾವತ್‌ಗೆ ಜಯ: ಬಿಜೆಪಿಗೆ ಮುಖಭಂಗ

Webdunia
ಬುಧವಾರ, 11 ಮೇ 2016 (15:56 IST)
ಉತ್ತರಾಖಂಡದ ಹರೀಶ್ ರಾವತ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಶ್ವಾಸ ಮತ ಯಾಚನೆಯಲ್ಲಿ ಬಹುಮತ ಸಾಧಿಸಿದ್ದು, ರಾಷ್ಟ್ರಪತಿ ಆಡಳಿತವನ್ನು ಶೀಘ್ರದಲ್ಲೇ ರದ್ದು ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂಕೋರ್ಟ್‌ಗೆ ತಿಳಿಸಿರುವುದರಿಂದ ಹರೀಶ್ ರಾವತ್ ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಉತ್ತರಾಖಂಡ ಆಡಳಿತ ಚುಕ್ಕಾಣಿಯನ್ನು ಕೈಗೆ ತೆಗೆದುಕೊಳ್ಳುವ ಬಯಕೆಹೊಂದಿದ್ದ ಬಿಜೆಪಿಗೆ ಮುಖಭಂಗವಾಗಿದೆ. 
 
 ಕಾಂಗ್ರೆಸ್‌ನ ರಾವತ್ ಅವರು 61 ಶಾಸಕರ ಪೈಕಿ 33 ಶಾಸಕರ ಬೆಂಬಲ ಪಡೆದಿದ್ದಾರೆ. ಪದಚ್ಯುತ ಮುಖ್ಯಮಂತ್ರಿ ಸದನದಲ್ಲಿ ಇನ್ನೂ ಬಹುಮತ ಹೊಂದಿದ್ದಾರೆಯೇ ಎಂಬ ಖಾತರಿಗೆ ವಿಶ್ವಾಸ ಮತವನ್ನು ಆಯೋಜಿಸಲಾಗಿತ್ತು. 9 ಶಾಸಕರು ಬಂಡಾಯವೆದ್ದಿರುವುದರಿಂದ ರಾವತ್ ಬಹುಮತ ಕಳೆದುಕೊಂಡಿದ್ದಾರೆಂದು ಹೇಳಿದ್ದ ಕೇಂದ್ರಸರ್ಕಾರ ಕಳೆದ ಮಾರ್ಚ್ 27ರಂದು ರಾಷ್ಟ್ರಪತಿ ಆಡಳಿತವನ್ನು ಹೇರಿತ್ತು. 
 
 9 ಬಂಡಾಯ ಕಾಂಗ್ರೆಸ್ ಶಾಸಕರ ಅನರ್ಹತೆ ಹಾಗೇ ಮುಂದುವರಿಯಲಿದ್ದು, ವಿಶ್ವಾಸ ಮತ ಯಾಚನೆಯಲ್ಲಿ ಮತದಾನ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಪ್ರತಿಪಾದಿಸಿದ್ದರಿಂದ ಬಿಜೆಪಿಗೆ ಹಿನ್ನಡೆಯಾಗಿತ್ತು.  ವಿಶ್ವಾಸ ಮತದ ಗೆಲುವನ್ನು ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಶ್ಲಾಘಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments