ಕಾಂಗ್ರೆಸ್ ಸೀಸನಲ್ ಹಿಂದೂ: ಅಯೋಧ್ಯೆಗೆ ಬರಲೊಪ್ಪದ ಕಾಂಗ್ರೆಸ್ ಗೆ ಕೇಂದ್ರ ಸಚಿವರ ಟೀಕೆ

Krishnaveni K
ಗುರುವಾರ, 11 ಜನವರಿ 2024 (10:34 IST)
ನವದೆಹಲಿ: ಅಯೋಧ್ಯೆಯಲ್ಲಿ ಲೋಕಾರ್ಪಣೆಯಾಗಲಿರುವ ರಾಮಮಂದಿರ ಕಾರ್ಯಕ್ರಮಕ್ಕೆ ಬರಲೊಪ್ಪದ ಕಾಂಗ್ರೆಸ್ ನಾಯಕರನ್ನು ಬಿಜೆಪಿ ಮತ್ತು ಬೆಂಬಲಿಗರು ತೀವ್ರವಾಗಿ ಟೀಕಿಸುತ್ತಿದ್ದಾರೆ.

ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರವನ್ನು ಬಿಜೆಪಿ ತನ್ನ ರಾಜಕೀಯ ಲಾಭಕ್ಕಾಗಿ ಬಳಸುತ್ತಿದೆ. ಇದು ಬಿಜೆಪಿ ಮತ್ತು ಆರ್ ಎಸ್ಎಸ್ ರಾಮಮಂದಿರ ಎಂದು ಕಾಂಗ್ರೆಸ್ ತನಗೆ ಬಂದ ಆಹ್ವಾನವನ್ನು ತಿರಸ್ಕರಿಸಿದೆ. ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮುಂತಾದ ಘಟಾನುಘಟಿ ನಾಯಕರಿಗೆ ಆಹ್ವಾನವಿತ್ತರೂ ಹಾಜರಿರುವುದಿಲ್ಲ ಎಂದು ಖಡಾ ಖಂಡಿತವಾಗಿ ಹೇಳಿದ್ದಾರೆ.

ಇದೇ ವಿಚಾರವನ್ನು ಈಗ ಬಿಜೆಪಿ ಅಸ್ತ್ರವಾಗಿ ಬಳಸಿದೆ. ಕಾಂಗ್ರೆಸ್ ಒಂದು ರೀತಿಯಲ್ಲಿ ಸೀಸನಲ್ ಹಿಂದೂ. ಕಾಲೋಚಿತವಾಗಿ ಧರ್ಮ ಬದಲಾಯಿಸುತ್ತದೆ. ವೋಟ್ ಬೇಕಾದಾಗ ಹಿಂದೂಗಳ ಬಗ್ಗೆ ಮೃದು ಧೋರಣೆ ತಾಳುತ್ತಾರೆ. ಜವಹರಲಾಲ್ ನೆಹರೂ ಅವಧಿಯಿಂದ ಇಲ್ಲಿಯವರೆಗೆ ಯಾವ ಕಾಂಗ್ರೆಸಿಗರೂ ಅಯೋಧ್ಯೆಗೆ ತೆರಳಿಲ್ಲ. ಅಯೋಧ್ಯೆ ಪ್ರಕರಣ  ಕೋರ್ಟ್ ನಲ್ಲಿ ಬಾಕಿಯಾಗಲು ಕಾಂಗ್ರೆಸ್ ಪಕ್ಷವೇ ಕಾರಣವಾಗಿತ್ತು. ಹೀಗಾಗಿ ಆ ಪಕ್ಷಕ್ಕೆ ಅಯೋಧ್ಯೆಗೆ ಹೋಗುವ ನೈತಿಕತೆಯೂ ಇಲ್ಲ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments