Webdunia - Bharat's app for daily news and videos

Install App

ಮೇಘಾಲಯದಲ್ಲಿ ಗೆದ್ದರೂ ಕಾಂಗ್ರೆಸ್ ಗೆ ಗದ್ದುಗೆಯಿಲ್ಲ!

Webdunia
ಸೋಮವಾರ, 5 ಮಾರ್ಚ್ 2018 (08:29 IST)
ನವದೆಹಲಿ: ತ್ರಿರಾಜ್ಯ ವಿಧಾನ ಸಭಾ ಚುನಾವಣೆಗಳ ಪೈಕಿ ಮೇಘಾಲಯದಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿ ಅಧಿಕಾರದ ಚುಕ್ಕಾಣಿ ಹಿಡಿಯುವ ಕನಸು ಕಾಣುತ್ತಿದ್ದ ಕಾಂಗ್ರೆಸ್ ಗೆ ಬಿಜೆಪಿ ದೊಡ್ಡ ಶಾಕ್ ನೀಡಿದೆ.

21 ಶಾಸಕರ ಬಲವಿದ್ದ ಕಾಂಗ್ರೆಸ್ ನಾಯಕರು ಮೊನ್ನೆಯೇ ರಾಜ್ಯ ಪಾಲರನ್ನು ಭೇಟಿಯಾಗಿ ಅಧಿಕಾರ ವಹಿಸಲು ಅವಕಾಶ ಕೇಳಿದ್ದರು. ಆದರೆ ಕಾಂಗ್ರೆಸ್ ಗೆ ಬಹುಮತವಿಲ್ಲ. ಹೀಗಾಗಿ ಎನ್ ಪಿಪಿ ಜತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ಯೋಜೆನ ಹಾಕಿತ್ತು.

ಆದರೆ ಕಾಂಗ್ರೆಸ್ ಲೆಕ್ಕಾಚಾರ ಹಾಕುವ ವೇಳೆಗೆ ಇತ್ತ 4 ಸ್ಥಾನಗಳ ಬಲವುಳ್ಳ ಬಿಜೆಪಿ ಎನ್ ಪಿಪಿ ಮೈತ್ರಿ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಅಧಿಕಾರದತ್ತ ಹೆಜ್ಜೆ ಇಟ್ಟಿದೆ. ಇದು ಮತ್ತೊಮ್ಮೆ ಗೋವಾದಲ್ಲಿ ನಡೆದಿದ್ದ ವಿದ್ಯಮಾನವನ್ನು ನೆನಪಿಸಿದೆ. ಅಲ್ಲೂ ಕಾಂಗ್ರೆಸ್  ಅತೀಹೆಚ್ಚು ಸ್ಥಾನಗಳನ್ನು ಗೆದ್ದರೂ ಇತರರ ಸಹಾಯದಿಂದ ಬಿಜೆಪಿ ಅಧಿಕಾರ ವಹಿಸಿಕೊಂಡಿದೆ.

ಇದೀಗ ಮೇಘಾಲಯದಲ್ಲಿ ಅಂತಹ ಪರಿಸ್ಥಿತಿ ಬಾರದೇ ಇರಲು ಕಾಂಗ್ರೆಸ್ ನಾಯಕರು ಯತ್ನಿಸಿದರು ಅದು ಕೈ ಗೂಡಿಲ್ಲ. ಹೀಗಾಗಿ ಈಶಾನ್ಯದ ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರುತ್ತಿದೆ. ಕಾಂಗ್ರೆಸ್ ಬೆಪ್ಪಾಗಿ ಕುಳಿತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments