Select Your Language

Notifications

webdunia
webdunia
webdunia
webdunia

ನಿರ್ಮಲಾ ಸೀತಾರಾಮ್ ಗೆ ನಿರ್ಬಲ ಸೀತಾರಾಮ್ ಎಂದು ಲೇವಡಿ ಮಾಡಿದ ಕಾಂಗ್ರೆಸ್. ಕಾರಣವೇನು ಗೊತ್ತಾ?

ನಿರ್ಮಲಾ ಸೀತಾರಾಮ್ ಗೆ ನಿರ್ಬಲ ಸೀತಾರಾಮ್ ಎಂದು ಲೇವಡಿ ಮಾಡಿದ ಕಾಂಗ್ರೆಸ್. ಕಾರಣವೇನು ಗೊತ್ತಾ?
ನವದೆಹಲಿ , ಮಂಗಳವಾರ, 3 ಡಿಸೆಂಬರ್ 2019 (06:58 IST)
ನವದೆಹಲಿ : ಭಾರತದ ಆರ್ಥಿಕತೆ ವಿಚಾರದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸ್ವಂತ ನಿರ್ಧಾರ ತೆಗೆದುಕೊಳ್ಳಲು ಬಿಜೆಪಿಯವರು ಬಿಡದ ಕಾರಣ ಕಾಂಗ್ರೆಸ್ ನಾಯಕರು ಅವರನನ್ನು ನಿರ್ಬಲ ಸೀತಾರಾಮನ್ ಎಂದು ಲೇವಡಿ ಮಾಡಿದ್ದಾರೆ.



ಸೋಮವಾರದ ನಡೆದ ಲೋಕಸಭಾ ಅಧಿವೇಶನದಲ್ಲಿ ತೆರಿಗೆ ಕಾನೂನು  ಮಸೂದೆಯ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ಮಾತನಾಡಿದ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ನಿರ್ಬಲ ಸೀತಾರಾಮನ್ ಎಂದು ಕರೆದು ಲೇವಡಿ ಮಾಡಿದ್ದಾರೆ.


ಬಿಜೆಪಿ ಸರ್ಕಾರದ ಹಲವು ದೂರದರ್ಶಿ ಯೋಜನೆಗಳು ಆರ್ಥಿಕತೆಯ ನಿಧಾನಗತಿಗೆ ಕಾರಣವಾಗಿದೆ. ಹೀಗಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ನಿರ್ಬಲ ಸೀತಾರಾಮನ್ ಎಂದು ಕರೆಯದೇ ಬೇರೆ ದಾರಿಯಿಲ್ಲ ಎಂದು ವ್ಯಂಗ್ಯ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತ ಬಾಲಕಿಯನ್ನು ದನದ ಕೊಟ್ಟಿಗೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ ಕಾಮುಕ