Webdunia - Bharat's app for daily news and videos

Install App

ಕೇರಳದಲ್ಲಿ ಬಿಜೆಪಿ ಸರಕಾರ ರಚನೆ: ಅಮಿತ್ ಶಾರದ್ದು ಹಗಲುಗನಸು ಎಂದ ಕಾಂಗ್ರೆಸ್

Webdunia
ಸೋಮವಾರ, 26 ಸೆಪ್ಟಂಬರ್ 2016 (14:27 IST)
ಕೇರಳದಲ್ಲಿ ಮುಂದಿನ ಬಾರಿ ಬಿಜೆಪಿ ಸರಕಾರ ರಚಿಸಲಿದೆ ಎನ್ನುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿಕೆ ತಿರುಕನ ಕನಸಾಗಿದೆ ಎಂದು ಕಾಂಗ್ರೆಸ್ ವರ್ಣಿಸಿದೆ.
 
ಕೋಝಿಕೋಡ್‌ನಲ್ಲಿ ಅಮಿತ್ ಶಾ ಹೇಳಿಕೆ ಕುರಿತಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಕೇರಳ ಕಾಂಗ್ರೆಸ್ ಘಟಕದ ಅಧ್ಯಕ್ಷ ವಿ.ಎಂ.ಸುಧೀರನ್, ಇದೊಂದು ಹಗಲುಗನಸಾಗಿದೆ. ಹಗಲುಗನಸು ಕಾಣಲು ಬಿಡಿ ಎಂದು ಲೇವಡಿ ಮಾಡಿದ್ದಾರೆ. 
 
ಮುಂದಿನ ಬಾರಿ ಕೇರಳದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದರು.  
 
ಕೇಂದ್ರದಲ್ಲಿರುವ ಎನ್‌ಡಿಎ ಸರಕಾರ, ಹಿಂದೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಉತ್ತರ ಕಾಶ್ಮಿರದ ಉರಿ ಸೇನಾ ಕೇಂದ್ರದ ಮೇಲೆ ನಡೆದ ಉಗ್ರರ ದಾಳಿ ಕೂಡಾ ಸರ್ಕಾರದ ವೈಫಲ್ಯಕ್ಕೆ ಕಾರಣವಾಗಿದೆ ಎಂದು ಸುಧೀರನ್ ವಾಗ್ದಾಳಿ ನಡೆಸಿದರು.
 
ಪಠಾನ್‌ಕೋಟ್ ದಾಳಿಯಿಂದ ಕೇಂದ್ರ ಸರಕಾರ ಪಾಠ ಕಲಿತಿದ್ದಲ್ಲಿ ಇಂತಹ ಘಟನೆ ಮರುಕಳಿಸುತ್ತಿರಲಿಲ್ಲ. ದೇಶದ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ಸಂಸತ್ತಿನಲ್ಲಿ ಚರ್ಚಿಸಬೇಕೆ ಹೊರತು ಪಕ್ಷದ ವೇದಿಕೆಯಲ್ಲಲ್ಲ ಎಂದು ಕೇರಳ ಕಾಂಗ್ರೆಸ್ ಘಟಕದ ಅಧ್ಯಕ್ಷ ವಿ.ಎಂ.ಸುಧೀರನ್ ಬಿಜೆಪಿ ಮುಖಂಡರಿಗೆ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಗೀನ ಮಕ್ಕಳಿಗೆ ಬುದ್ದಿ ಹೇಳುವುದು ಕಷ್ಟ, ಮೊಬೈಲ್ ಗೀಳು ಬಿಡು ಎಂದಿದ್ದಕ್ಕೆ ಯುವತಿ ಹೀಗೇ ಮಾಡೋದಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments