Webdunia - Bharat's app for daily news and videos

Install App

ಕೇರಳದಲ್ಲಿ ಬಿಜೆಪಿ ಸರಕಾರ ರಚನೆ: ಅಮಿತ್ ಶಾರದ್ದು ಹಗಲುಗನಸು ಎಂದ ಕಾಂಗ್ರೆಸ್

Webdunia
ಸೋಮವಾರ, 26 ಸೆಪ್ಟಂಬರ್ 2016 (14:27 IST)
ಕೇರಳದಲ್ಲಿ ಮುಂದಿನ ಬಾರಿ ಬಿಜೆಪಿ ಸರಕಾರ ರಚಿಸಲಿದೆ ಎನ್ನುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿಕೆ ತಿರುಕನ ಕನಸಾಗಿದೆ ಎಂದು ಕಾಂಗ್ರೆಸ್ ವರ್ಣಿಸಿದೆ.
 
ಕೋಝಿಕೋಡ್‌ನಲ್ಲಿ ಅಮಿತ್ ಶಾ ಹೇಳಿಕೆ ಕುರಿತಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಕೇರಳ ಕಾಂಗ್ರೆಸ್ ಘಟಕದ ಅಧ್ಯಕ್ಷ ವಿ.ಎಂ.ಸುಧೀರನ್, ಇದೊಂದು ಹಗಲುಗನಸಾಗಿದೆ. ಹಗಲುಗನಸು ಕಾಣಲು ಬಿಡಿ ಎಂದು ಲೇವಡಿ ಮಾಡಿದ್ದಾರೆ. 
 
ಮುಂದಿನ ಬಾರಿ ಕೇರಳದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದರು.  
 
ಕೇಂದ್ರದಲ್ಲಿರುವ ಎನ್‌ಡಿಎ ಸರಕಾರ, ಹಿಂದೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಉತ್ತರ ಕಾಶ್ಮಿರದ ಉರಿ ಸೇನಾ ಕೇಂದ್ರದ ಮೇಲೆ ನಡೆದ ಉಗ್ರರ ದಾಳಿ ಕೂಡಾ ಸರ್ಕಾರದ ವೈಫಲ್ಯಕ್ಕೆ ಕಾರಣವಾಗಿದೆ ಎಂದು ಸುಧೀರನ್ ವಾಗ್ದಾಳಿ ನಡೆಸಿದರು.
 
ಪಠಾನ್‌ಕೋಟ್ ದಾಳಿಯಿಂದ ಕೇಂದ್ರ ಸರಕಾರ ಪಾಠ ಕಲಿತಿದ್ದಲ್ಲಿ ಇಂತಹ ಘಟನೆ ಮರುಕಳಿಸುತ್ತಿರಲಿಲ್ಲ. ದೇಶದ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ಸಂಸತ್ತಿನಲ್ಲಿ ಚರ್ಚಿಸಬೇಕೆ ಹೊರತು ಪಕ್ಷದ ವೇದಿಕೆಯಲ್ಲಲ್ಲ ಎಂದು ಕೇರಳ ಕಾಂಗ್ರೆಸ್ ಘಟಕದ ಅಧ್ಯಕ್ಷ ವಿ.ಎಂ.ಸುಧೀರನ್ ಬಿಜೆಪಿ ಮುಖಂಡರಿಗೆ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments