Webdunia - Bharat's app for daily news and videos

Install App

ಒಮರ್ ಅಬ್ದುಲ್ಲಾಗೆ ಜಮ್ಮು ಕಾಶ್ಮೀರದಲ್ಲಿ ಸರ್ಕಾರ ರಚಿಸಲು ಈಗ ಕಾಂಗ್ರೆಸ್ ನೆರವೇ ಬೇಕಾಗಿಲ್ಲ

Krishnaveni K
ಶುಕ್ರವಾರ, 11 ಅಕ್ಟೋಬರ್ 2024 (09:39 IST)
ಕಾಶ್ಮೀರ: ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬೃಹತ್ ಪಕ್ಷವಾಗಿ ಹೊರಹೊಮ್ಮಿರುವ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಒಮರ್ ಅಬ್ದುಲ್ಲಾ ಈಗ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಆದರೆ ಒಮರ್ ಅಬ್ದುಲ್ಲಾಗೆ ಬಹುಮತದೊಂದಿಗೆ ಸರ್ಕಾರ ರಚಿಸಲು ಕೆಲವೇ ಸ್ಥಾನಗಳ ಕೊರತೆಯಿದ್ದು ಇದನ್ನು ಪಕ್ಷೇತರರು ನೀಗಿಸಲಿದ್ದಾರೆ. ಒಮರ್ ಅಬ್ದುಲ್ಲಾ ಪಕ್ಷಕ್ಕೆ ಈಗಾಗಲೇ ಪಕ್ಷೇತರರು ಬೆಂಬಲ ಘೋಷಿಸಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ 42 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇತರರು 7 ಸ್ಥಾನಗಳನ್ನು ಗೆದ್ದುಕೊಂಡಿದ್ದರು.

ಇದೀಗ ಒಮರ್ ಪಕ್ಷಕ್ಕೆ ಇತರರು ಬೆಂಬಲ ಘೋಷಿಸಿರುವುದರಿಂದ ಕಾಂಗ್ರೆಸ್ ಅಥವಾ ಬಿಜೆಪಿಯ ಸಹಾಯವಿಲ್ಲದೇ ಸರ್ಕಾರ ರಚಿಸಬಹುದಾಗಿದೆ. ನ್ಯಾಷನಲ್ ಕಾನ್ಫರೆನ್ಸ್ ಕಾಂಗ್ರೆಸ್ ಗೆ ಡಿಚ್ಚಿ ಹೊಡೆದು ಇತರರ ಜೊತೆ ಸೇರಿಕೊಂಡು ಸರ್ಕಾರ ರಚಿಸಲು ಮುಂದಾಗಿದೆ.

ಈ ನಡುವೆ ಒಮರ್ ಅಬ್ದುಲ್ಲಾ ಪಕ್ಷಕ್ಕೆ ಸರ್ಕಾರ ರಚಿಸಲು ಬೆಂಬಲ ಘೋಷಿಸಬೇಕಾ ಬೇಡವಾ ಎಂಬ  ಬಗ್ಗೆ ಕಾಂಗ್ರೆಸ್ ಇಂದು ತೀರ್ಮಾನ ತೆಗೆದುಕೊಳ್ಳಲಿದೆ. ಜಮ್ಮು ಕಾಶ್ಮೀರದಲ್ಲಿ ಚುನಾವಣೆ ಗೆದ್ದ ಬಳಿಕ ಒಮರ್ ಕೇಂದ್ರ ಸರ್ಕಾರ ಹಾಗೂ ಮೋದಿಯನ್ನು ಹೊಗಳಿದ್ದು ಕಾಂಗ್ರೆಸ್ ಅಸಮಾಧಾನಕ್ಕೆ ಗುರಿಯಾಗಿದೆ. ಹೀಗಾಗಿ ಇಂದು ಜಮ್ಮುವಿನಲ್ಲಿ ರಚನೆಯಾಗಲಿರುವ ನೂತನ ಸರ್ಕಾರಕ್ಕೆ ಬೆಂಬಲ ಘೋಷಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments