Webdunia - Bharat's app for daily news and videos

Install App

ಹರ್ಯಾಣ ಸೋಲು: ವೋಟಿಂಗ್ ಮೆಷಿನ್ ಸರಿಯಿಲ್ಲ ಎಂದು ತಾಂತ್ರಿಕ ಸಮಿತಿ ರಚಿಸಲು ಮುಂದಾದ ಕಾಂಗ್ರೆಸ್

Krishnaveni K
ಶುಕ್ರವಾರ, 11 ಅಕ್ಟೋಬರ್ 2024 (09:10 IST)
ಹರ್ಯಾಣ: ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ ಬೆನ್ನಲ್ಲೇ ಕಾಂಗ್ರೆಸ್ ಮತ ಯಂತ್ರದಲ್ಲಿನ ದೋಷಗಳ ಬಗ್ಗೆ ಅಧ್ಯಯನ ನಡೆಯಲು ತಾಂತ್ರಿಕ ಸಮಿತಿಯೊಂದನ್ನು ರಚನೆ ಮಾಡಿದೆ.

ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಎಕ್ಸಿಟ್ ಪೋಲ್ ವರದಿಗಳು ಹೇಳಿದ್ದವು. ಆದರೆ  ಬಿಜೆಪಿಯೇ ಮತ್ತೆ ಮೂರನೇ ಬಾರಿಗೆ ಬಹುಮತದೊಂದಿಗೆ ಅಧಿಕಾರಕ್ಕೇರಿತ್ತು. ಇದಾದ ಬಳಿಕ ಮತ ಎಣಿಕೆ ಪ್ರಕ್ರಿಯೆ ಬಗ್ಗೆ ಕಾಂಗ್ರೆಸ್ ಸಂಶಯ ವ್ಯಕ್ತಪಡಿಸಿತ್ತು.

ರಾಹುಲ್ ಗಾಂಧಿ ಕೂಡಾ ನಿನ್ನೆ ಟ್ವೀಟ್ ಮಾಡಿ ನಮಗೆ ಇತ್ತೀಚೆಗೆ ನಡೆದ ಕೆಲವು ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಅನುಮಾನವಿದೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ಈಗ ತಾಂತ್ರಿಕ ಸಮಿತಿ ರಚನೆ ಮಾಡಲು ಮುಂದಾಗಿದೆ.

ಹರ್ಯಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮತ ಯಂತ್ರದ ಬಗ್ಗೆ ವ್ಯಕ್ತಪಡಸಿರುವ ಸಂಶಯಗಳ ಬಗ್ಗೆ ಈ ತಾಂತ್ರಿಕ ಸಮಿತಿ ತನಿಖೆ ನಡೆಸಲಿದೆ. ಹಿರಿಯ ನಾಯಕರಾದ ಭೂಪಿಂದರ್ ಸಿಂಗ್ ಹೂಡಾ, ಅಶೋಕ್ ಗೆಹ್ಲೋಟ್, ಕೆಸಿ ವೇಣುಗೋಪಾಲ್, ಜೈ ರಾಮ್ ರಮೇಶ್, ಅಜಯ್ ಮಕೇನ್ ಮೊದಲಾದವರು ಸಭೆ ಸೇರಿಸಿ ಚರ್ಚೆ ನಡೆಸಿ ಈ ಸಮಿತಿ ರಚನೆ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

ಮುಂದಿನ ಸುದ್ದಿ
Show comments