Select Your Language

Notifications

webdunia
webdunia
webdunia
webdunia

ಮೇಘಾಲಯದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಕಸರತ್ತು

ಮೇಘಾಲಯದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಕಸರತ್ತು
ನವದೆಹಲಿ , ಭಾನುವಾರ, 4 ಮಾರ್ಚ್ 2018 (12:07 IST)
ನವದೆಹಲಿ: ಮೇಘಾಲಯ ವಿಧಾನಸಭೆ ಚುನಾವಣೆಯಲ್ಲಿ 21 ಸ್ಥಾನ ಗೆದ್ದು ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಕಾಂಗ್ರೆಸ್ ಸರ್ಕಾರ ರಚನೆಗೆ ಕಸರತ್ತು ನಡೆಸಿದೆ.

ಕಾಂಗ್ರೆಸ್ ಹಿರಿಯ ನಾಯಕರಾದ ಅಹಮ್ಮದ್ ಪಟೇಲ್ ಮತ್ತು ಕಮಲ ನಾಥ್ ನಿನ್ನೆ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ.

‘ಸರ್ಕಾರ ರಚನೆಗೆ ನಾವು ಹಕ್ಕು ಮಂಡಿಸಲಿದ್ದೇವೆ. ನಮಗೆ ಇತರ ಪಕ್ಷಗಳ ಬೆಂಬಲ ಸಿಗಲಿದೆ ಎಂಬ ವಿಶ್ವಾಸವಿದೆ. ಇಲ್ಲಿ ಬಿಜೆಪಿಗೆ ಎರಡೇ ಸ್ಥಾನ ಸಿಕ್ಕಿದೆ. ಹಾಗಾಗಿ ಜನ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ ಎಂಬುದಕ್ಕೆ ಸ್ಪಷ್ಟ ಸಾಕ್ಷಿ ಸಿಕ್ಕಿದೆ. ನಾವು ಈಗಾಗಲೇ ಇತರ ರಾಜಕೀಯ ಪಕ್ಷಗಳೊಂದಿಗೆ ಸಂಪರ್ಕದಲ್ಲಿದ್ದೇವೆ’ ಎಂದು ಕಮಲ್ ನಾಥ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪಕ್ಷ ಸೋಲುತ್ತಿದ್ದರೆ ಇಟೆಲಿಯಲ್ಲಿ ಹೋಲಿ ಆಡುತ್ತಿದ್ದ ರಾಹುಲ್ ಗಾಂಧಿ!