ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿನ ದಯನೀಯ ಸೋಲನ್ನು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಒಪ್ಪಿಕ್ಕೊಂಡಿದ್ದಾರೆ.
"ಜನರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ. ಮಹಾರಾಷ್ಟ್ರದಲ್ಲಿ ೧೫ ವರ್ಷ ಮತ್ತು ಹರಿಯಾಣದಲ್ಲಿ ೧೦ ವರ್ಷದ ಕಾಂಗ್ರೆಸ್ ಆಳ್ವಿಕೆಯ ನಂತರ ಜನರು ಬದಲಾವಣೆಗೆ ಮತ ಹಾಕಿದ್ದಾರೆ ಎಂದು ತಮ್ಮ ಕಚೇರಿಯಿಂದ ಹೊರಬಿದ್ದ ಹೇಳಿಕೆಯಲ್ಲಿ ರಾಹುಲ್ ತಿಳಿಸಿದ್ದಾರೆ.
ಕಾಂಗ್ರೆಸ್ ಮತ್ತೆ ತಳಮಟ್ಟದಲ್ಲಿ ಕೆಲಸ ಮಾಡಿ ಜನರ ವಿಶ್ವಾಸವನ್ನು ಗಳಿಸಲಿದೆ ಎಂದಿದ್ದಾರೆ.ಈ ಗೆಲುವಿಗೆ ಭಾರತೀಯ ಜನತಾ ಪಕ್ಷವನ್ನು ಅಭಿನಂದಿಸಿದ್ದಾರೆ.