Webdunia - Bharat's app for daily news and videos

Install App

ಮೋದಿ ಸರಕಾರದಲ್ಲಿ ಭ್ರಷ್ಟಾಚಾರ, ದರ ಏರಿಕೆ ಹೆಚ್ಚಳ : ಸೋನಿಯಾ ಗುಡುಗು

Webdunia
ಶುಕ್ರವಾರ, 12 ಫೆಬ್ರವರಿ 2016 (14:24 IST)
ದೇಶದಲ್ಲಿ ಹೆಚ್ಚುತ್ತಿರುವ  ಭ್ರಷ್ಟಾಚಾರ ಮತ್ತು ದರ ಏರಿಕೆ ಕುರಿತಂತೆ ಪ್ರಧಾನಮಂತ್ರಿ ಮೋದಿ ಸರಕಾರದ ದುರಾಡಳಿತವನ್ನು ಕಾಂಗ್ರೆಸ್ ಪಕ್ಷ ಜನತೆಯ ಮುಂದಿಡಲಿದೆ ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಗುಡುಗಿದ್ದಾರೆ.
 
ಎರಡು ದಿನಗಳ ಭೇಟಿಗಾಗಿ ನಗರಕ್ಕೆ ಆಗಮಿಸಿದ ಸೋನಿಯಾ ಗಾಂಧಿ, ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು ಒಗ್ಗಟ್ಟಿನಿಂದ ನೋದಿ ಸರಕಾರದ ನೀತಿಗಳ ವಿರುದ್ಧ ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು.
 
ಮೋದಿ ಸರಕಾರ ಭ್ರಷ್ಟಾಚಾರದ ಬಗ್ಗೆ ದೊಡ್ಡ ದೊಡ್ಡ ಭಾಷಣಗಳನ್ನು ಮಾಡುತ್ತದೆ. ಆದರೆ, ಮಧ್ಯಪ್ರದೇಶ, ರಾಜಸ್ಥಾನ, ಚತ್ತೀಸ್‌ಗಢ್ ಮತ್ತು ಗುಜರಾತ್ ರಾಜ್ಯಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಗಳ ಬಗ್ಗೆ ಮೌನವಹಿಸಿದೆ ಎಂದು ವಾಗ್ದಾಳಿ ನಡೆಸಿದರು.
 
ಮೋದಿ ಸರಕಾರ ದುರಾಡಳಿತವನ್ನು ಕಾಂಗ್ರೆಸ್ ಪಕ್ಷ ದೇಶದ ಜನತೆಯ ಮುಂದಿಡಲಿದೆ. ಕಾಂಗ್ರೆಸ್ ಕಾರ್ಯಕರ್ತರು ಇಂತಹ ದುರಾಡಳಿತದ ವಿರುದ್ಧ ಒಂದಾಗಿ ಹೋರಾಟ ನಡೆಸಲು ಸಿದ್ದರಾಗಬೇಕು ಎಂದು ಕರೆ ನೀಡಿದರು.
 
ದೇಶದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಹಣದುಬ್ಬರ, ಬರಪೀಡಿತ ಪ್ರದೇಶಗಳಲ್ಲಿ ರೈತರ ಸಂಕಷ್ಟ ಸರಕಾರಕ್ಕೆ ಕಾಣಿಸುತ್ತಿಲ್ಲ. ಬಂಡವಾಳಶಾಹಿಗಳ ಕೋಟಿ ಕೋಟಿ ರೂಪಾಯಿಗಳ ಸಾಲವನ್ನು ಮನ್ನಾ ಮಾಡಲು ಯೋಜನೆ ರೂಪಿಸುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಕಿಡಿಕಾರಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments