Webdunia - Bharat's app for daily news and videos

Install App

ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಧರಣಿ

Webdunia
ಗುರುವಾರ, 2 ಏಪ್ರಿಲ್ 2015 (18:00 IST)
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾರವರ ವಿರುದ್ಧ ವರ್ಣ ತಾರತಮ್ಯದ ಹೇಳಿಕೆ ನೀಡಿರುವ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಗೃಹದ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಗುಂಪು ಪ್ರತಿಭಟನೆ ಕೈಗೊಂಡಿತು. 
 
ಬಿಜೆಪಿ, ಪ್ರಧಾನಿ ಮೋದಿ ಮತ್ತು ಸಿಂಗ್ ವಿರುದ್ಧ ಘೋಷಣೆ ಕೂಗುತ್ತ  ವಿಠ್ಠಲ್ ಭಾಯಿ ಪಟೇಲ್ ಹೌಸ್ ಸಂಕೀರ್ಣದ ಮುಂದೆ ನೆರೆದ ಕಾಂಗ್ರೆಸ್ ಕಾರ್ಯಕರ್ತರು ಸಿಂಗ್ ತಮ್ಮ ಹೇಳಿಕೆಯನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದರು. ಆದರೆ  ಸಿಂಗ್ ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ತೆರಳಿದ್ದರು. 
 
ಸಿಂಗ್ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ಮಹಿಳಾ ವಿಭಾಗದ ಅಧ್ಯಕ್ಷೆ ಶೋಭಾ ಓಝಾ," ಸಚಿವರಾಗಿ ಇಂತಹ ಭಾಷೆ ಬಳಸಿರುವುದು ಸ್ವೀಕಾರಾರ್ಹವಲ್ಲ, ಇದಕ್ಕೆ ಪ್ರತಿಯಾಗಿ ಗಿರಿರಾಜ್ ರಾಜೀನಾಮೆಯನ್ನು ಹೊರತು ಪಡಿಸಿ ನಾವೇನನ್ನು ಬಯಸುವುದಿಲ್ಲ", ಎಂದಿದ್ದಾರೆ. 
 
ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಧರಣಿ ನಿರತರಿಂದ ಬ್ಯಾನರ್ಸ್ ವಶಪಡಿಸಿಕೊಂಡರು ಮತ್ತು ಸಿಂಗ್ ಬೊಂಬೆ ಸುಡುವುದನ್ನು ತಡೆದರು. 
 
ಸೋನಿಯಾ ಗಾಂಧಿಯವರ ಮೈಬಣ್ಣ ಅವರನ್ನು ಕಾಂಗ್ರೆಸ್ ಅಧ್ಯಕ್ಷಳನ್ನಾಗಿಸಿದೆ. ರಾಜೀವ್ ನೈಜಿರಿಯನ್ ಮೂಲದ ಕಪ್ಪು ಮಹಿಳೆಯನ್ನು ಮದುವೆಯಾಗಿದ್ದರೆ ಅವರನ್ನು ಸಹ ಕಾಂಗ್ರೆಸ್ ತಮ್ಮ ನಾಯಕಿಯನ್ನಾಗಿ ಒಪ್ಪಿಕೊಳ್ಳುತ್ತಿತ್ತೆ ಎಂದು ಕೇಂದ್ರ ಮಂತ್ರಿ ಗಿರಿರಾಜ್ ಸಿಂಗ್ ಮಂಗಳವಾರ ಪತ್ರಕರ್ತರ ಬಳಿ ಹೇಳಿದ್ದರು. ಇದಕ್ಕೆ ದೇಶಾದ್ಯಂತ ವಿರೋಧ ಪಕ್ಷಗಳು ತೀವೃ ಖಂಡನೆ ವ್ಯಕ್ತಪಡಿಸಿವೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments