Webdunia - Bharat's app for daily news and videos

Install App

ಸಯಾಮಿ ಅವಳಿಗಳ ತಲೆ ಬೇರ್ಪಡಿಸಿದ ದೆಹಲಿ ಏಮ್ಸ್ ವೈದ್ಯರು

Webdunia
ಗುರುವಾರ, 26 ಅಕ್ಟೋಬರ್ 2017 (11:22 IST)
ನವದೆಹಲಿ: ಹುಟ್ಟುವಾಗಲೇ ಎರಡು ತಲೆಗಳು ಒಟ್ಟಿಗೆ ಜೋಡಣೆಯಾಗಿದ್ದ ಸಯಾಮಿ ಅವಳಿ ಮಕ್ಕಳನ್ನು ಬೇರ್ಪಡಿಸುವಲ್ಲಿ ದೆಹಲಿ ಏಮ್ಸ್‌ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ.

ಒಡಿಶಾ ಮೂಲದ ಎರಡೂವರೆ ವರ್ಷದ ಜಗನ್ನಾಥ್‌ ಹಾಗೂ ಬಲರಾಮ್‌ ಎಂಬ ಅವಳಿ ಮಕ್ಕಳು ಹುಟ್ಟುತ್ತಲೇ ದೇಹ ಬೇರೆ-ಬೇರೆಯಾಗಿದ್ದು ತಲೆಗಳು ಪರಸ್ಪರ ಅಂಟಿಕೊಂಡಿದ್ದವು. ಈ ಮಕ್ಕಳು ಒಡಿಶಾದ ಕಂಧಾಮಲ್‌ ಜಿಲ್ಲೆಯ ಕೃಷಿ ದಂಪತಿಯ ಮಕ್ಕಳಾಗಿದ್ದು, ಜುಲೈ 14ರಂದು  ಭುವನೇಶ್ವರದಿಂದ ದೆಹಲಿಗೆ ಚಿಕಿತ್ಸೆಗೆ ಕರೆ ತರಲಾಗಿತ್ತು.

ನಿನ್ನೆ(ಅ.25) ಬೆಳಗ್ಗೆ 6 ಗಂಟೆಗೆ ಇಬ್ಬರನ್ನೂ ಆಪರೇಷನ್‌ ಥಿಯೇಟರ್‌ಗೆ ಕರೆದ್ಯೊಯಲಾಯಿತು. 9 ಗಂಟೆ ಶುರುವಾದ ಬೇರ್ಪಡಿಸುವ ಶಸ್ತ್ರಚಿಕಿತ್ಸೆ ಸತತ 11 ಗಂಟೆಗಳ ಕಾಲ ನಡೆಯಿತು. ಜಗನ್ನಾಥ್‌, ಬಲರಾಮ್‌ ತಲೆಗಳನ್ನು ಯಶಸ್ವಿಯಾಗಿ ಬೇರ್ಪಡಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

ಅವಳಿ ಮಕ್ಕಳಿಬ್ಬರ ತಲೆಗಳ ಬೇರ್ಪಡಿಸುವಿಕೆ ಶಸ್ತ್ರಚಿಕಿತ್ಸೆ ವೈದ್ಯಕೀಯ ಲೋಕದಲ್ಲೇ ಅತಿ ವಿರಾಳ. ಈ ರೀತಿ 30 ಲಕ್ಷ ಮಕ್ಕಳಲ್ಲಿ ಒಬ್ಬರಿಗೆ ಮಾತ್ರ ಆಗುತ್ತಿದೆ. ಇದರಲ್ಲಿ ಶೇ.50ರಷ್ಟು ಮಕ್ಕಳು ಹೆರಿಗೆ ಸಮಯದಲ್ಲಿ ಅಥವಾ ಹುಟ್ಟಿದ 24 ಗಂಟೆಯೊಳಗಡೆ ಸಾವನ್ನಪ್ಪುತ್ತವೆ. ಶೇ.25ರಷ್ಟು ಮಾತ್ರ ಶಸ್ತ್ರಚಿಕಿತ್ಸೆ ಯಶಸ್ವಿಯಾಗೋದು ಅಂತಾ ವೈದ್ಯರು ಹೇಳಿದ್ದಾರೆ.

ಏಮ್ಸ್‌ ಆಸ್ಪತ್ರೆಗೆ ಜಗನ್ನಾಥ್‌ ಮತ್ತು ಬಲರಾಮ್‌ ದಾಖಲಾದ ಬಳಿಕ ಆಗಸ್ಟ್‌ನಲ್ಲಿ ಮೊದಲ ಹಂತದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದಾದ ಬಳಿಕ ನಿನ್ನೆ ಎರಡನೇ ಹಂತ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಜಗನ್ನಾಥ್‌, ಬಲರಾಮ್‌ ಇಬ್ಬರ ಆರೋಗ್ಯ ಸ್ಥಿರವಾಗಿದೆ. ಇಂದು ಮಕ್ಕಳಿಗೆ ವೈದ್ಯರು ಪ್ಲಾಸ್ಟಿಕ್‌ ಸರ್ಜರಿ ನಡೆಸಲಿದ್ದಾರೆ. ಇದಾದ ಬಳಿಕ 72 ಗಂಟೆಗಳ ಕಾಲ ಇಬ್ಬರನ್ನೂ ನಿಗಾದಲ್ಲಿ ಇಡುವ ಸಾಧ್ಯತೆ ಇದೆ. ಜಗನ್ನಾಥ್‌ ಹಾಗೂ ಬಲರಾಮ್‌ ಬೇರ್ಪಡಿಸಲು ಒಡಿಶಾ ಸರ್ಕಾರ ಏಮ್ಸ್‌ ಆಸ್ಪತ್ರೆಗೆ 1 ಕೋಟಿ ರೂ. ಮಂಜೂರು ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments