Webdunia - Bharat's app for daily news and videos

Install App

ಬಿಜೆಪಿ ಸಂಸದ ಪ್ರತಾಪ್ ಗೆ ಗಾಯ: ಎಲ್ಲಾ ನಾಟಕ ಎಂದ ಕೆಸಿ ವೇಣುಗೋಪಾಲ್

Krishnaveni K
ಗುರುವಾರ, 19 ಡಿಸೆಂಬರ್ 2024 (14:39 IST)
Photo Credit: X
ನವದೆಹಲಿ: ಸಂಸತ್ತಿನ ಹೊರಾವರಣದಲ್ಲಿ ಇಂದು ನಡೆದ ಗದ್ದಲದ ಬಗ್ಗೆ ಕೆಪಿಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಪ್ರತಿಕ್ರಿಯಿಸಿದ್ದು ಇದೆಲ್ಲಾ ಬಿಜೆಪಿಯವರ ಅಮಿತ್ ಶಾ ಬಚಾವೋ ಆಂದೋಲನದ ನಾಟಕ ಎಂದು ವ್ಯಂಗ್ಯವಾಡಿದ್ದಾರೆ.

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಗೆ ಅವಮಾನ ಮಾಡಿದ್ದಾರೆಂದು ಪ್ರತಿಪಕ್ಷಗಳು ಸಂಸತ್ ನ ಹೊರಭಾಗದಲ್ಲಿ ಪ್ರತಿಭಟನೆ ನಡೆಸುತ್ತಿರುವಾಗ ಆಡಳಿತ ಮತ್ತು ವಿಪಕ್ಷ ಸಂಸದರ ನಡುವೆ ನೂಕಾಟ-ತಳ್ಳಾಟ ನಡೆದಿದೆ. ಈ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಾರಂಗ್ ಬಿದ್ದು ಹಣೆಗೆ ಗಾಯವಾಗಿದೆ. ಇನ್ನೊಬ್ಬ ಬಿಜೆಪಿ ಸಂಸದ ಮುಕೇಶ್ ರಜಪೂತ್ ಗೂ ಗಾಯವಾಗಿ ಆಸ್ಪತ್ರೆ ಸೇರಿದ್ದಾರೆ. ತಮ್ಮನ್ನು ರಾಹುಲ್ ಗಾಂಧಿ ತಳ್ಳಿದ್ದರು ಎಂದು ಸಂಸದ ಪ್ರತಾಪ್ ಆರೋಪಿಸಿದ್ದಾರೆ.

ಈ ವಿಚಾರವೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಸಿ ವೇಣುಗೋಪಾಲ್ ಗಾಯವಾಗಿದ್ದು ಬಿಜೆಪಿಯ ನಾಟಕದ ಭಾಗ ಎಂದಿದ್ದಾರೆ. ಅಮಿತ್ ಶಾ ಹೇಳಿಕೆಯಿಂದಾದ ಡ್ಯಾಮೇಜ್ ಸರಿಪಡಿಸಲು ಬಿಜೆಪಿ ಈಗ ಗಾಯದ ನಾಟಕವಾಡುತ್ತಿದೆ ಎಂದು ವ್ಯಂಗ್ಯ ಮಾಡಿದ್ದಾರೆ. ಕಳೆದ 15 ದಿನಗಳಿಂದಲೂ ಪ್ರತಿಪಕ್ಷಗಳು ಸಂಸತ್ ಹೊರಾವರಣದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿವೆ. ಇಂದು ಮಾತ್ರ ಹೀಗೆ ಯಾಕೆ ಆಯಿತು? ಇದೆಲ್ಲಾ ಬಿಜೆಪಿಯ ನಾಟಕ ಎಂದಿದ್ದಾರೆ.

ಇನ್ನು, ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪೊಲೀಸರಿಗೆ ದೂರು ನೀಡಲು ತೀರ್ಮಾನಿಸಿದೆ. ರಾಹುಲ್ ಗಾಂಧಿ ತಳ್ಳಾಟದಿಂದಲೇ ಬಿಜೆಪಿ ಸಂಸದರಿಗೆ ಗಾಯವಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲೂ ಬಿಜೆಪಿ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ. ಪ್ರಾಥಮಿಕ ಚಿಕಿತ್ಸೆ ಬಳಿಕ ಗಾಯಗೊಂಡಿದ್ದ ಬಿಜೆಪಿ ಸಂಸದರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಇತರೆ ನಾಯಕರು ಆರೋಗ್ಯ ವಿಚಾರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments