Webdunia - Bharat's app for daily news and videos

Install App

ಸಿಬಲ್ ವಿರುದ್ದ ನ್ಯಾಯಾಂಗ ನಿಂದನೆ ಕೇಸ್ !

Webdunia
ಮಂಗಳವಾರ, 9 ಆಗಸ್ಟ್ 2022 (12:09 IST)
ನವದೆಹಲಿ : ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿ ಮಾತನಾಡಿದ್ದ ಮಾಜಿ ಕಾಂಗ್ರೆಸ್ ನಾಯಕ, ಹಿರಿಯ ವಕೀಲ, ಪ್ರಸ್ತುತ ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಾಗುವ ಸಾಧ್ಯತೆಯಿದೆ.

ವಕೀಲರಾದ ವಿನೀತ್ ಜಿಂದಾಲ್ ಮತ್ತು ಶಶಾಂಕ್ ಶೇಖರ್ ಝಾ ಅವರು, ಭಾರತೀಯ ನ್ಯಾಯಾಂಗದ ವಿರುದ್ಧ ಹೇಳಿಕೆ ನೀಡಿ ಘನತೆಗೆ ಅವಮಾನ ಮಾಡಿದ್ದಾರೆ. ಅವರ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲು ಒಪ್ಪಿಗೆ ನೀಡುವಂತೆ ಭಾರತದ ಅಟಾರ್ನಿ ಜನರಲ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಸುಪ್ರೀಂ ಕೋರ್ಟ್ ಮತ್ತು ನ್ಯಾಯಾಂಗದ ವಿರುದ್ಧ ಸಿಬಲ್ ಮಾಡಿದ ಟೀಕೆಗಳ ಬಗ್ಗೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ(ಬಿಸಿಐ) ಕೂಡ ಟೀಕಿಸಿದೆ. ಹಿರಿಯ ವಕೀಲ ಮತ್ತು ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ, ಕಪಿಲ್ ಸಿಬಲ್ ಅವರು ಇಂತಹ ಹೇಳಿಕೆ ನೀಡಿರುವುದು ಅತ್ಯಂತ ದುರದೃಷ್ಟಕರ.

ಅವರು ಕಾನೂನು ಕ್ಷೇತ್ರದ ಧೀಮಂತರು ಮತ್ತು ದೇಶದ ಮಾಜಿ ಕಾನೂನು ಸಚಿವರೂ ಆಗಿದ್ದಾರೆ. ಎರಡು, ಮೂರು ಪ್ರಕರಣದಲ್ಲಿ ಸೋತಿದ್ದಕ್ಕೆ ನ್ಯಾಯಾಂಗವನ್ನು ಗುರಿಯಾಗಿ ಮಾತನಾಡುವುದು ಸರಿಯಲ್ಲ. ನ್ಯಾಯಾಂಗವು ಮುಕ್ತ ಮತ್ತು ಸ್ವತಂತ್ರ ಸಂಸ್ಥೆಯಾಗಿದೆ. ಅದರ ಮೇಲೆ ದಾಳಿ ಮಾಡಬಾರದು ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments