Webdunia - Bharat's app for daily news and videos

Install App

ಟಿಟವಿ ದಿನಕರನ್ ವಿರುದ್ಧ ವಿವಾದಾತ್ಮಕ ಹೇಳಿಕೆ; ನಟ ಕಮಲ್ ಹಾಸನ್ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ

Webdunia
ಶನಿವಾರ, 6 ಜನವರಿ 2018 (11:43 IST)
ಚೆನ್ನೈ : ನಟ ಕಮಲ್ ಹಾಸನ್ ಅವರು ಟಿಟಿವಿ ದಿನಕರನ್ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ಕೆಲ ಸಂಘಟನೆಗಳು ಅವರ ನಿವಾಸದೆದುರು ಪ್ರತಿಭಟನೆ ಮಾಡುವುದಾಗಿ ಹೇಳಿಕೆ ನೀಡಿದ್ದ ಕಾರಣ ನಟ ಕಮಲ್ ಹಾಸನ್ ಅವರ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆಯನ್ನು ನೀಡಲಾಗಿದೆ.

 
ಇತ್ತಿಚೆಗೆ ನಡೆದ ಆರ್.ಕೆ.ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ  ಪಕ್ಷೇತರ ಅಭ್ಯರ್ಥಿ ಟಿಟಿವಿ ದಿನಕರನ್ ಅವರು ಗೆಲುವು ಸಾಧಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ, ತಮಿಳು ನಿಯತಕಾಲಿಕ ‘ಆನಂದ ವಿಕಟನ್’ ಗೆ ಬರೆದ ಲೇಖನದಲ್ಲಿ ವಿಧಾನಸಭಾ ಉಪಚುನಾವಣೆಯ ಫಲಿತಾಂಶದ ಕುರಿತು ಕಮಲ್ ಹಾಸನ್ ಅವರು ಪ್ರಸ್ತಾಪಿಸಿದ್ದು, ಆರ್.ಕೆ.ನಗರ ಕ್ಷೇತ್ರದ ಗೆಲುವನ್ನು ಖರೀದಿಸಲಾಗಿದೆ ಎಂದು ಟೀಕಿಸಿದ್ದು, ದಿನಕರನ್ ಗೆಲುವಿನ ಹಿಂದೆ ಹಣದ ಶಕ್ತಿ ಇದೆ ಎಂದು ಹೇಳಿದ್ದರು.

 
ಇದರಿಂದಾಗಿ ಆರ್.ಕೆ.ನಗರದ ಮತದಾರರು ತಮ್ಮನ್ನು ಅವಮಾನಿಸಿದರೆಂದು ಕೋಪಗೊಂಡಿದ್ದು, ಕೆಲ ಸಂಘಟನೆಗಳು ಕಮಲ್ ಹಾಸನ್ ಅವರ ನಿವಾಸದೆದುರು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಅದಕ್ಕಾಗಿ ಅವರ ನಿವಾಸಕ್ಕೆ ಬಿಗಿ ಭದ್ರತೆ ಮಾಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments