Webdunia - Bharat's app for daily news and videos

Install App

ವಿವಾದ : ಅರ್ಜಿ ವಿಚಾರಣೆಗೆ ಗ್ರೀನ್ ಸಿಗ್ನಲ್?

Webdunia
ಶುಕ್ರವಾರ, 20 ಮೇ 2022 (09:02 IST)
ಲಕ್ನೋ : ಜ್ಞಾನವ್ಯಾಪಿ ಮಸೀದಿ ಸಮೀಕ್ಷೆಗೆ ಅನುಮತಿ ಸಿಕ್ಕಿದ ಬೆನ್ನಲ್ಲೇ ಮಥುರಾದ ಶ್ರೀಕೃಷ್ಣ ಜನ್ಮಭೂಮಿ ವಿವಾದ ಸಂಬಂಧ ಸಲ್ಲಿಕೆಯಾದ ಅರ್ಜಿ ವಿಚಾರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
 
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀಕ್ಷೆ ಕೋರಿ ಸಲ್ಲಿಸಿದ್ದ ಅರ್ಜಿಗಳು ವಿಚಾರಣೆಗೆ ಅರ್ಹವಾಗಿದೆ ಎಂದು ಮಥುರಾ ಜಿಲ್ಲಾ ನ್ಯಾಯಾಲಯ ಹೇಳಿದೆ.

ಮಥುರಾ ಶ್ರೀಕೃಷ್ಣನ ಜನ್ಮ ಸ್ಥಳವಾಗಿದೆ. ಪ್ರಸ್ತುತ ಈಗ ಇರುವ ಶಾಹಿ ಈದ್ಗಾ ಮಸೀದಿಯನ್ನು ಅಕ್ರಮ ಎಂದು ಘೋಷಿಸಿ ಅದನ್ನು ನೆಲಸಮಗೊಳಿಸಬೇಕು ಮತ್ತು 13.37 ಎಕರೆ ಸಂಪೂರ್ಣ ಭೂಮಿಯನ್ನು ಡಿ-ಫಾಕ್ಟೋ ಮಾಲೀಕ ಭಗವಾನ್ ಶ್ರೀ ಕೃಷ್ಣ ವಿರಾಜಮಾನರಿಗೆ ಹಸ್ತಾಂತರಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. 

ವಕೀಲರಾದ ರಂಜನಾ ಅಗ್ನಿಹೋತ್ರಿ ಸೇರಿ ಇತರ ಆರು ಮಂದಿ ಕಳೆದ ವರ್ಷ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಇವರು ಅಷ್ಟೇ ಅಲ್ಲದೇ ಇನ್ನು ಅನೇಕ ಮಂದಿ ಅರ್ಜಿ ಸಲ್ಲಿಸಿದ್ದರು.

ಶಾಹಿ ಈದ್ಗಾ ಮಸೀದಿಯನ್ನು ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ 1669-70ರಲ್ಲಿ ಶ್ರೀಕೃಷ್ಣನ ಜನ್ಮಸ್ಥಳದ ಸಮೀಪವಿರುವ ಕತ್ರಾ ಕೇಶವ್ ದೇವ್ ದೇವಸ್ಥಾನದ ಬಳಿ ನಿರ್ಮಿಸಲಾಗಿದೆ. 13.37 ಎಕರೆ ಜಾಗದಲ್ಲಿ ಹರಡಿರುವ ಶ್ರೀ ಕೃಷ್ಣ ಜನ್ಮಭೂಮಿ ದೇವಸ್ಥಾನದ ಒಂದು ಭಾಗವನ್ನು ಕೆಡವಿ ಶಾಹಿ ಈದ್ಗಾ ಮಸೀದಿಯನ್ನು ನಿರ್ಮಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments