Webdunia - Bharat's app for daily news and videos

Install App

ಶಶಿಕಲಾ ಪತಿ ನಟರಾಜನ್ ಗೆ ಶಸ್ತ್ರಚಿಕಿತ್ಸೆ: ಇದೀಗ ವಿವಾದದಲ್ಲಿ

Webdunia
ಗುರುವಾರ, 5 ಅಕ್ಟೋಬರ್ 2017 (09:55 IST)
ಚೆನ್ನೈ: ಅಕ್ರಮ ಆಸ್ಥಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ಶಶಿಕಲಾ ಪತಿ ನಟರಾಜನ್ ಅಂಗ ಕಸಿ ಶಸ್ತ್ರಚಿಕಿತ್ಸೆಯ ಸುತ್ತ ಇದೀಗ ವಿವಾದ ಅಂಟಿಕೊಂಡಿದೆ.

 
ಚೆನ್ನೈನ ಗ್ಲೋಬಲ್ ಸಿಟಿ ಆಸ್ಪತ್ರೆಯಲ್ಲಿ ನಟರಾಜನ್ ಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದೇ ಆಸ್ಪತ್ರೆಗೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡ 19 ವರ್ಷದ ಯುವಕ ದಾಖಲಾಗಿದ್ದ. ಆತನ ಅಂಗಾಂಗಳನ್ನು ನಟರಾಜನ್ ಗೆ ಜೋಡಿಸಲಾಗಿದೆ.

ಈ ಸಂದರ್ಭದಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ  ಎಂದು ದೂರಲಾಗಿದೆ. ಆದರೆ ಆಸ್ಪತ್ರೆ ಮೂಲಗಳು ಇದನ್ನು ನಿರಾಕರಿಸಿದ್ದು, ಅಂಗಾಂಗ ಆಕಾಂಕ್ಷಿಗಳ ಪಟ್ಟಿಯಲ್ಲಿ ನಟರಾಜನ್ ಹೆಸರು ಮುಂಚೂಣಿಯಲ್ಲಿತ್ತು. ಹೀಗಾಗಿ ಯುವಕನ ಕುಟುಂಬದವರ ಒಪ್ಪಿಗೆಯೊಂದಿಗೇ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಅಲ್ಲದೆ, ಯುವಕನ ಒಂದು ಮೂತ್ರಪಿಂಡವನ್ನು ಸರ್ಕಾರಿ ಆಸ್ಪತ್ರೆಗೆ ನೀಡಲಾಗಿದೆ.

ಉಳಿದ ಅಂಗಾಂಗಳನ್ನು ನಿಯಮದಂತೇ ಗ್ಲೋಬಲ್ ಆಸ್ಪತ್ರೆಗೆ ಬಳಸಲು ಅವಕಾಶವಿದೆ ಎಂದು ಆಸ್ಪತ್ರೆ ಸ್ಪಷ್ಟನೆ ನೀಡಿದೆ. ನಟರಾಜನ್ ಗೆ ಒಂದು ಕಿಡ್ನಿ ಮತ್ತು ಪಿತ್ತಜನಕಾಂಗವನ್ನು ಶಸ್ತ್ರಚಿಕಿತ್ಸೆ ಮೂಲಕ ಜೋಡಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments