Webdunia - Bharat's app for daily news and videos

Install App

ಅಬ್ದುಲ್ ಕಲಾಂ ಸಮಾಧಿ ಬಳಿ ಭಗವದ್ಗೀತೆ ಪುಸ್ತಕ ವಿವಾದಕ್ಕೆ ಕಾರಣವಾಯ್ತು

Webdunia
ಸೋಮವಾರ, 31 ಜುಲೈ 2017 (10:29 IST)
ರಾಮೇಶ್ವರಂ: ದಿವಂಗತ ಮಾಜಿ ರಾಷ್ಟ್ರಪತಿ, ವಿಜ್ಞಾನಿ ಡಾ. ಎಪಿಜೆ ಅಬ್ದುಲ್ ಕಲಾಂ ಬದುಕಿದ್ದಾಗ ಸರ್ವಧರ್ಮವೂ ಒಂದೇ ಎಂದು ಅಕ್ಷರಶಃ ಪಾಲಿಸಿದವರು. ಆದರೆ ಮೊನ್ನೆಯಷ್ಟೇ ಲೋಕಾರ್ಪಣೆಗೊಂಡ ಅವರ ಸಮಾಧಿ ಸ್ಮಾರಕದಲ್ಲಿ ಭಗವದ್ಗೀತೆ ಪುಸ್ತಕ ಇರಿಸಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ.


ಸ್ಮಾರಕದಲ್ಲಿರುವ ಕಲಾಂ ಮರದ ಪ್ರತಿಮೆಯ ಬಳಿ ಹಿಂದೂಗಳ ಪವಿತ್ರ ಧರ್ಮ ಗ್ರಂಥವಾದ ಭಗವದ್ಗೀತೆ ಇರಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದೀಗ ವಿವಾದವನ್ನು ಬಗೆಹರಿಸಲು ಮುಂದಾಗಿರುವ ಕಲಾಂ ಕುಟುಂಬಸ್ಥರು ಅಲ್ಲಿ ಮುಸ್ಲಿಂ ಮತ್ತು ಕ್ರೈಸ್ತ ಧರ್ಮ ಗ್ರಂಥವಾದ ಖುರಾನ್ ಮತ್ತು ಬೈಬಲ್ ನ್ನೂ ಇಡಲು ಸಲಹೆ ನೀಡಿದೆ.

ಆದರೆ ಸ್ಮಾರಕದ ಬಳಿ ಖುರಾನ್ ಮತ್ತು ಬೈಬಲ್ ನ್ನು ಇಟ್ಟಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯ ಹಿಂದೂ ಸಂಘಟನೆ ನಾಯಕರು ಪೊಲೀಸರಿಗೆ ದೂರು ನೀಡಿದ್ದಾರೆ. ಇಲ್ಲಿ ಭಗವದ್ಗೀತೆ ಹೊರತುಪಡಿಸಿ ಬೇರೆ ಗ್ರಂಥಗಳನ್ನು ಇಡಲು ಅನುಮತಿ ಇರಲಿಲ್ಲ ಎನ್ನುವುದು ಈ ನಾಯಕರ ವಾದ. ಆದರೆ ಕಲಾಂ ಎಲ್ಲಾ ಭಾರತೀಯರಿಗೂ ಸೇರಿದವರಾಗಿದ್ದರು. ಅವರು ಯಾವುದೇ ಧರ್ಮಕ್ಕೆ ಸೀಮಿತವಾದವರಲ್ಲ. ಈ ವಿಚಾರದಲ್ಲಿ ವಿವಾದ ಮಾಡಬೇಡಿ ಎಂದು ಕಲಾಂ ಕುಟುಂಬ ಮನವಿ ಮಾಡಿದೆ.

ಇದನ್ನೂ ಓದಿ..  ಕೊಹ್ಲಿ ಜತೆ ಬರಿಮೈ ತೋರಿಸಿದ ಕೆಎಲ್ ರಾಹುಲ್ ಕಾಲೆಳೆದ ಯುವರಾಜ್ ಸಿಂಗ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments