Select Your Language

Notifications

webdunia
webdunia
webdunia
webdunia

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಮಧ್ಯಪ್ರದೇಶ ಅಪರಾಧ ಪ್ರಕರಣ

Sampriya

ಜಬಲ್‌ಪುರ , ಶುಕ್ರವಾರ, 20 ಜೂನ್ 2025 (19:21 IST)
Photo Credit X
ಜಬಲ್‌ಪುರ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಗೆ ಗುಣಮುಖರಾಗಬೇಕೆಂದರೆ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಡ ಹೇರಿದ ಘಟನೆ ಬಗ್ಗೆ ವರದಿಯಾಗಿದೆ. 

ಅನಾರೋಗ್ಯದಿಂದ ಗುಣಮುಖರಾಗುವ ನೆಪದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಡ ಹೇರಿ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿ ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಪ್ರಕರಣ ದಾಖಲಿಸಿದ್ದಾರೆ. 

ಶುಕ್ರವಾರ ಪೊಲೀಸ್ ಅಧಿಕಾರಿಯೊಬ್ಬರು ಈ ಸಂಬಂಧ ತಿಳಿಸಿದ್ದಾರೆ. 

ಪೊಲೀಸರು ಮನೋಜ್ ಪಿಳ್ಳೆ, ವಿನೋದ್ ರಾಜಿ ಮತ್ತು ಇತರರ ವಿರುದ್ಧ ಮಧ್ಯಪ್ರದೇಶದ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ, ಇದು ಬಲ, ವಂಚನೆ ಅಥವಾ ಆಮಿಷದ ಮೂಲಕ ಮತಾಂತರವನ್ನು ನಿಷೇಧಿಸುತ್ತದೆ. 

ತನಿಖೆಯನ್ನು ಪ್ರಾರಂಭಿಸಲಾಗಿದೆ ಮತ್ತು ಆರೋಪಿಗಳನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿ ಹೇಳಿದರು. ವಿಷಯದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ