ಮತಾಂತರ ಕಿರುಕುಳ : ವಿದ್ಯಾರ್ಥಿನಿ ಆತ್ಮಹತ್ಯೆ!

Webdunia
ಶುಕ್ರವಾರ, 21 ಜನವರಿ 2022 (07:36 IST)
ಚೆನ್ನೈ : ತಮಿಳುನಾಡಿನ ತಂಜಾವೂರಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿ,
 
ದೌರ್ಜನ್ಯ ನಡೆಸಿದ್ದರಿಂದ ಆಕೆ ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಕ್ಷಣ ಆಕೆಯನ್ನು ಆಕೆಯ ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ವೈದ್ಯರ ಚಿಕಿತ್ಸೆಗೆ ಸ್ಪಂದಿಸದ ಆಕೆ ತಂಜಾವೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದಾಳೆ.

ಲಾವಣ್ಯ ಎಂಬ 17 ವರ್ಷದ ಯುವತಿ ತಂಜಾವೂರಿನ ಸೇಂಟ್ ಮೈಕಲ್ಸ್ ಗರ್ಲ್ಸ್ ಹೋಮ್ ಎಂಬ ಹಾಸ್ಟೆಲ್ನಲ್ಲಿದ್ದುಕೊಂಡು ಓದುತ್ತಿದ್ದಳು. ಆ ಹಾಸ್ಟೆಲ್ನ ವಾರ್ಡನ್ ಆಕೆಯಿಂದ ಹಾಸ್ಟೆಲ್ನ ಎಲ್ಲಾ ಕೊಠಡಿಗಳನ್ನು ಸ್ವಚ್ಛಗೊಳಿಸುತ್ತಿದ್ದರು. ಅಲ್ಲದೆ, ನಿರಂತರವಾಗಿ ಆಕೆಯನ್ನು ನಿಂದಿಸುತ್ತಿದ್ದರು.

ವಾರ್ಡನ್ನಿಂದ ನನಗೆ ಬಹಳ ಕಿರುಕುಳವಾಗುತ್ತಿದೆ ಎಂದು ಲಾವಣ್ಯ ಒಪ್ಪಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ನನ್ನನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ನಿರಂತರವಾಗಿ ಒತ್ತಾಯಿಸಲಾಗುತ್ತಿತ್ತು. ಇದೆಲ್ಲದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆಂದು ಆ ಹುಡುಗಿ ಆರೋಪಿಸಿದ್ದಾಳೆ.

ಈ ಘಟನೆಗಳಿಂದ ವಿಚಲಿತಳಾದ ಆ ಯುವತಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ವಿಷ ಸೇವಿಸಿ ವಾಂತಿ ಮಾಡಿಕೊಂಡು ತೀವ್ರ ಹೊಟ್ಟೆನೋವಿನಿಂದ ನರಳುತ್ತಿದ್ದ ಆಕೆಯನ್ನು ಹಾಸ್ಟೆಲ್ನವರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಕೆ ಬದುಕುಳಿಯಲಿಲ್ಲ ಎಂದು ಲಾವಣ್ಯ ಅವರ ತಂದೆ ಮುರುಗಾನಂದಂ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ವೈದ್ಯರು ತಿರುಕಟ್ಟುಪಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಪೊಲೀಸರು ಲಾವಣ್ಯಳನ್ನು ವಿಚಾರಿಸಲು ಬಂದಿದ್ದರು. ವಿಚಾರಣೆಯ ಆಧಾರದ ಮೇಲೆ, ಬೋರ್ಡಿಂಗ್ ಸ್ಕೂಲ್ ವಾರ್ಡನ್ ಲಾವಣ್ಯಗೆ ಕಿರುಕುಳ ನೀಡಿದ್ದಾರೆ ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದಾರೆ ಎಂಬುದು ಪೊಲೀಸರಿಗೆ ಖಾತರಿಯಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಮೋದಿ ಯುವಜನತೆಯನ್ನು ರೀಲ್ಸ್ ದಾಸರನ್ನಾಗಿಸಿದ್ದಾರೆ: ರಾಹುಲ್

ಕೊಯಮತ್ತೂರು ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್‌, ಆರೋಪಿಗಳಿಗೆ ಕಾಲಿಗೆ ಗುಂಡೇಟು

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಎಚ್‌.ವೈ.ಮೇಟಿ ವಿಧಿವಶ

ನಮ್ಮ ಮುಖ್ಯಮಂತ್ರಿಗಳು ಹೇಳಿರುವುದು ಸರಿಯಿದೆ: ಜಿ. ಪರಮೇಶ್ವರ್‌

Karnataka Today Weather: ರಾಜ್ಯದ ಈ ಭಾಗದಲ್ಲಿ ಇಂದು ಮಳೆಯಾಗಲಿದೆ

ಮುಂದಿನ ಸುದ್ದಿ
Show comments