Webdunia - Bharat's app for daily news and videos

Install App

ಕೇರಳದಲ್ಲಿ ದಾಖಲೆ ಮಟ್ಟದಲ್ಲಿ ಕೊರೊನಾ ಸೋಂಕು ಪತ್ತೆ: ಕೊರೊನಾ ಮೂರನೇ ಅಲೆ ಆರಂಭ?

Webdunia
ಗುರುವಾರ, 26 ಆಗಸ್ಟ್ 2021 (10:02 IST)
ತಿರುವನಂತಪುರಂ: ಒಂದೆಡೆ ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದರೆ, ಮತ್ತೊಂದೆಡೆ ಕೇರಳದಲ್ಲಿ ದಾಖಲೆ ಮಟ್ಟದಲ್ಲಿ ಕೊರೊನಾ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಯಲ್ಲಿ ಕೇರಳದಲ್ಲಿ 31,445 ಹೊಸ ಪ್ರಕರಣ ದಾಖಲಾಗಿದ್ದು, ಇದು ಮೂರು ತಿಂಗಳಲ್ಲೇ ಗರಿಷ್ಠವಾಗಿದೆ. ಆ ಮೂಲಕ ರಾಜ್ಯದಲ್ಲಿ ಮೂರನೇ ಅಲೆ ಆರಂಭವಾಗಿದೆಯೇ ಎಂಬ ಆತಂಕ ಮೂಡಿದೆ.

ಓಣಂ ಹಬ್ಬದ ಬಳಿಕ ದಿನೇದಿನೆ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿದೆ. ಮೇ 20ರಂದು ಕೇರಳದಲ್ಲಿ 30,491 ಮಂದಿಗೆ ಸೋಂಕು ದೃಢಪಟ್ಟಿತ್ತು. ಇದಾದ ಬಳಿಕ ಮೊದಲ ಬಾರಿಗೆ ಸೋಂಕಿತರ ಸಂಖ್ಯೆ 30 ಸಾವಿರ ದಾಟಿದೆ. ದೇಶಾದ್ಯಂತ 24 ಗಂಟೆಯಲ್ಲಿ 37,593 ಜನಕ್ಕೆ ಸೋಂಕು ತಗುಲಿದರೆ, ಇವರಲ್ಲಿ 31,445 ಜನ ಕೇರಳದವರೇ ಆಗಿರುವುದರಿಂದ ರಾಜ್ಯದಲ್ಲಿ ಮೂರನೇ ಅಲೆ ಆರಂಭವಾಗಿದೆಯೇ ಎಂಬ ಪ್ರಶ್ನೆ ಮೂಡಿದೆ.
ಕೊರೊನಾ ಮೂರನೇ ಅಲೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಸುತ್ತಿದ್ದರೂ ಕಳೆದ ತಿಂಗಳಿಂದ ಪಿಣರಾಯಿ ವಿಜಯನ್ ನೇತೃತ್ವದ ಸರಕಾರವು ನಿಯಮ ಸಡಿಲಿಸುತ್ತಲೇ ಇದೆ. ಕಳೆದ ತಿಂಗಳು ಬಕ್ರೀದ್ ಹಿನ್ನೆಲೆಯಲ್ಲಿ ಕೊರೊನಾ ನಿರ್ಬಂಧ ಸಡಿಲಿಸಿದ ಪರಿಣಾಮ ನಿತ್ಯ ಸೋಂಕಿತರ ಸಂಖ್ಯೆ 20 ಸಾವಿರ ದಾಟಿತ್ತು. ಹಾಗಾಗಿಯೇ ಜುಲೈ 27ರಿಂದ ಇದುವರೆಗೆ ನಿತ್ಯ ಸರಾಸರಿ 20 ಸಾವಿರ ಪ್ರಕರಣಗಳೇ ದಾಖಲಾಗಿವೆ. ಈಗ ಓಣಂ ಹಿನ್ನೆಲೆಯಲ್ಲಿ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಆಗಸ್ಟ್ 21ರಂದು ಓಣಂ ಆಚರಿಸಲಾಗಿದೆ.
ಎರ್ನಾಕುಲಂ ಜಿಲ್ಲೆಯೊಂದರಲ್ಲೇ 4,048 ಪ್ರಕರಣ ದಾಖಲಾದರೆ, ತ್ರಿಶ್ಶೂರ್ನಲ್ಲಿ 3,865, ಕಲ್ಲಿಕೋಟೆ 3,680, ಮಲಪ್ಪುರಂ 3,502, ಪಾಲಕ್ಕಾಡ್ 2,562, ಕೊಲ್ಲಂ 2,479, ಕೊಟ್ಟಾಯಂನಲ್ಲಿ2,050 ಹೊಸ ಪ್ರಕರಣಗಳು ದಾಖಲಾಗಿವೆ. ಅತ್ತ ಸಾವಿನ ಸಂಖ್ಯೆಯೂ ಹೆಚ್ಚಾಗಿದ್ದು, ಒಂದೇ ದಿನದಲ್ಲಿ215 ಜನ ಮೃತಪಟ್ಟಿದ್ದಾರೆ.
ಕೊರೊನಾ ಪಾಸಿಟಿವಿಟಿ ಪ್ರಮಾಣವೂ ಶೇ.19ಕ್ಕೆ ಏರಿಕೆಯಾಗಿದೆ. ಮಂಗಳವಾರ ಸಹ 24 ಸಾವಿರ ಜನರಿಗೆ ಕೊರೊನಾ ದೃಢಪಟ್ಟಿತ್ತು. ದೇಶದ ಒಟ್ಟು ಸೋಂಕಿತರಲ್ಲಿ ಕೇರಳದ ಸೋಂಕಿತರ ಸಂಖ್ಯೆಯೇ ಬಹುಪಾಲು ಇರುವುದರಿಂದ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಟೀಕೆ ಸಹ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments