Webdunia - Bharat's app for daily news and videos

Install App

ಭ್ರಷ್ಟಾಚಾರ, ಜಾತಿವಾದ, ಕೋಮುವಾದಕ್ಕೆ ಭಾರತದಲ್ಲಿ ಸ್ಥಾನವಿಲ್ಲ: ನರೇಂದ್ರ ಮೋದಿ

Webdunia
ಸೋಮವಾರ, 4 ಸೆಪ್ಟಂಬರ್ 2023 (10:38 IST)
ನವದೆಹಲಿ : ಸ್ವಾತಂತ್ರ್ಯದ 100 ನೇ ವರ್ಷಾಚರಣೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ. ಅದರಲ್ಲಿ ಭ್ರಷ್ಟಾಚಾರ, ಜಾತಿವಾದ, ಕೋಮುವಾದಕ್ಕೆ ಯಾವುದೇ ಸ್ಥಾನವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

2047 ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ. ಭ್ರಷ್ಟಾಚಾರ, ಜಾತಿಯತೆ ಮತ್ತು ಕೋಮುವಾದಕ್ಕೆ ನಮ್ಮ ರಾಷ್ಟ್ರೀಯ ಜೀವನದಲ್ಲಿ ಯಾವುದೇ ಸ್ಥಾನವಿಲ್ಲ ಎಂದು ಮೋದಿ ಹೇಳಿದ್ದಾರೆ.

ನವದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯ ಕುರಿತು ಮಾತನಾಡಿದ ಪ್ರಧಾನಿ, ಮಾರ್ಗದರ್ಶನಕ್ಕಾಗಿ ಜಗತ್ತು ಈಗ ಭಾರತದತ್ತ ನೋಡುತ್ತಿದೆ. ನಮ್ಮ ಮಾತುಗಳು ಮತ್ತು ದೃಷ್ಟಿಯನ್ನು ಜಗತ್ತು ಭವಿಷ್ಯದ ಮಾರ್ಗಸೂಚಿಯಾಗಿ ನೋಡುತ್ತದೆ. ಇದು ಕೇವಲ ಕಲ್ಪನೆಗಳಲ್ಲ. ವಿಶ್ವದ ಜಿಡಿಪಿ-ಕೇಂದ್ರಿತ ದೃಷ್ಟಿಕೋನವು ಮಾನವ-ಕೇಂದ್ರಿತ ದೃಷ್ಟಿಕೋನವಾಗಿ ಬದಲಾಗುತ್ತಿದೆ. ಈ ಪರಿವರ್ತನೆಯಲ್ಲಿ ಭಾರತವು ವೇಗವಾಗಿ ಬೆಳೆಯುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತದ ಬಗೆಗಿನ ಪ್ರಪಂಚದ ಗ್ರಹಿಕೆ ಹೇಗೆ ಬದಲಾಗುತ್ತಿದೆ ಎಂಬುದನ್ನು ಒತ್ತಿ ಹೇಳಿದ ಮೋದಿ, ದೀರ್ಘಕಾಲದಿಂದ ಭಾರತವನ್ನು ಒಂದು ಶತಕೋಟಿ ಹಸಿದ ಹೊಟ್ಟೆಗಳ ದೇಶವನ್ನಾಗಿ ನೋಡಲಾಗುತ್ತಿತ್ತು. ಈಗ ಅದು ಒಂದು ಶತಕೋಟಿ ಮಹತ್ವಾಕಾಂಕ್ಷೆಯ ಮನಸ್ಸುಗಳು ಮತ್ತು ಎರಡು ಶತಕೋಟಿ ಕೌಶಲ್ಯಪೂರ್ಣ ಕೈಗಳ ದೇಶವಾಗಿದೆ ಎಂದು ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments