Webdunia - Bharat's app for daily news and videos

Install App

ನಕಲಿ ಔಷಧ : 18 ಫಾರ್ಮಾ ಕಂಪನಿಗಳ ಪರವಾನಗಿ ರದ್ದು!

Webdunia
ಭಾನುವಾರ, 16 ಏಪ್ರಿಲ್ 2023 (14:47 IST)
ನವದೆಹಲಿ : ನಕಲಿ ಔಷಧಗಳನ್ನು ತಯಾರಿಸುತ್ತಿದ್ದ ಆರೋಪದ ಮೇಲೆ 18 ಫಾರ್ಮಾ ಕಂಪನಿಗಳ ಪರವಾನಗಿಯನ್ನು ಔಷಧ ನಿಯಂತ್ರಣ ಇಲಾಖೆ ರದ್ದುಗೊಳಿಸಿದೆ.
 
20 ರಾಜ್ಯಗಳ 76 ಕಂಪನಿಗಳ ಮೇಲೆ ತಪಾಸಣೆ ನಡೆಸಿದ ನಂತರ ಇಲಾಖೆ ಈ ಕ್ರಮವನ್ನು ಕೈಗೊಂಡಿದೆ. ಅಲ್ಲದೆ ಹಿಮಾಚಲ ಪ್ರದೇಶದ 70, ಉತ್ತರಾಖಂಡ್ನ 45 ಮತ್ತು ಮಧ್ಯಪ್ರದೇಶದ 23 ಕಂಪನಿಗಳ ಮೇಲೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. 

ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಕ್ರಮ ಕೈಗೊಳ್ಳಲಾಗಿರುವ ಹೆಚ್ಚಿನ ಕಂಪನಿಗಳು ನೋಂದಣಿಯಾಗಿವೆ. ಡೆಹ್ರಾಡೂನ್ನಲ್ಲಿ ನೋಂದಾಯಿಸಲಾದ ಹಿಮಾಲಯ ಮೆಡಿಟೆಕ್ ಪ್ರೈವೇಟ್ ಲಿಮಿಟೆಡ್ನ ಪರವಾನಗಿಯನ್ನು 2022ರ ಡಿ.30 ರಂದು ಅಮಾನತುಗೊಳಿಸಲಾಗಿತ್ತು. 12 ಉತ್ಪನ್ನಗಳನ್ನು ತಯಾರಿಸಲು ನೀಡಿದ್ದ ಅನುಮತಿಯನ್ನು 2023ರ ಫೆ.7 ರಂದು ರದ್ದುಗೊಳಿಸಲಾಗಿತ್ತು.

ಈ ಹಿಂದೆ ಹಿಮಾಚಲ ಪ್ರದೇಶದ ಶ್ರೀ ಸಾಯಿ ಬಾಲಾಜಿ ಕಂಪನಿಗೆ ಶೋಕಾಸ್ ನೋಟಿಸ್ ನೀಡಿ, ಔಷಧಗಳ ತಯಾರಿಕೆ ನಿಲ್ಲಿಸುವಂತೆ ಸೂಚಿಸಲಾಗಿತ್ತು. ಪರಿಶೀಲನೆಯ ನಂತರ ಹಿಂದಿನ ಆದೇಶವನ್ನು ರದ್ದುಗೊಳಿಸಲಾಗಿತ್ತು.

ಅಲ್ಲದೆ ಇಜಿ ಫಾರ್ಮಾಸ್ಯುಟಿಕಲ್ಸ್, ವಿಲ್ ಮಂಡಲ, ತೆಹ್ ಕಸೌಲಿ, ಡಿಸ್ಟ್ ಸೋಲನ್ ಸಂಸ್ಥೆಗಳಿಗೂ ನೋಟಿಸ್ ನೀಡಲಾಗಿತ್ತು. ಪರಿಶೀಲನೆಯ ನಂತರ ಉತ್ಪಾದನೆ ನಿಷೇಧಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ. ಅಥೆನ್ಸ್ ಲೈಫ್ ಸೈನ್ಸಸ್ ಕಂಪನಿಗೂ ಸಹ ಎಚ್ಚರಿಕೆಯನ್ನು ನೀಡಲಾಗಿತ್ತು.

ಹಿಮಾಚಲದ ಸೋಲನ್ನ ಜಿಎನ್ಬಿ ಮೆಡಿಕಾ ಲ್ಯಾಬ್ಗೆ ಮಾತ್ರೆಗಳು, ಕ್ಯಾಪ್ಸುಲ್ಗಳು, ಕೆಮ್ಮಿನ ಔಷಧಿಗಳು, ಚುಚ್ಚುಮದ್ದು ಮತ್ತು ಪ್ರೋಟಿನ್ ಪೌಡರ್ ಉತ್ಪಾದನೆಯನ್ನು ನಿಲ್ಲಿಸುವಂತೆ ಆದೇಶಿಸಲಾಗಿದೆ. ಕಂಪನಿಯ ಔಷಧಗಳನ್ನು ಪರಿಶೀಲನೆಗಾಗಿ ಕಳುಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಲಿಯಾಗಿದ್ದ ದಿವ್ಯಾಂಶಿ ಕಿವಿಯೋಲೆ ಎಗರಿಸಿದ್ದವ ಬಲೆಗೆ, ಆದರೆ ತಾಯಿಯ ಕೋರಿಕೆ ಈಡೇರಲೆ ಇಲ್ಲ

ನಮ್ಮ ಮೆಟ್ರೊ ಹಳದಿ ಮಾರ್ಗ ಲೋಕಾರ್ಪಣೆಗೆ ದಿನಗಣನೆ: ಪ್ರಧಾನಿ ಮೋದಿಯಿಂದ ಗ್ರೀನ್‌ಸಿಗ್ನಲ್‌

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ಮುಂದಿನ ಸುದ್ದಿ
Show comments