ಎಸ್ಬಿಐನಂಥ 4-5 ಬ್ಯಾಂಕ್ಗಳು ದೇಶಕ್ಕೆ ಬೇಕು : ನಿರ್ಮಲಾ ಸೀತಾರಾಮನ್ ಪ್ರತಿಪಾದನೆ

Webdunia
ಸೋಮವಾರ, 27 ಸೆಪ್ಟಂಬರ್ 2021 (10:51 IST)
ಮುಂಬೈ : ಭಾರತೀಯ ಸ್ಟೇಟ್ ಬ್ಯಾಂಕ್ನಂಥ ಇನ್ನೂ ನಾಲ್ಕರಿಂದ ಐದು ಬ್ಯಾಂಕ್ಗಳು ದೇಶಕ್ಕೆ ಅಗತ್ಯ. ದೇಶದ ಅರ್ಥ ವ್ಯವಸ್ಥೆಯನ್ನು ಬೆಂಬಲಿಸಲು ಅವು ನೆರವಾಗಲಿವೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಭಾನುವಾರ ಮುಂಬೈನಲ್ಲಿ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (ಐಬಿಎ)ನ 74ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
“ಬದಲಾಗುತ್ತಿರುವ ಅರ್ಥ ವ್ಯವಸ್ಥೆ, ಕೈಗಾರಿಕಾ ವ್ಯವಸ್ಥೆ ಅಳವಡಿಸಿಕೊಳ್ಳುತ್ತಿರುವ ನವೀನ ರೀತಿಯ ವ್ಯವಸ್ಥೆ ಮತ್ತು ವಹಿವಾಟು ಕ್ರಮಗಳನ್ನು ಅನುಸರಿಸುತ್ತಿವೆ. ಹೀಗಾಗಿ, ಹೊಸ ಸವಾಲುಗಳು ದೇಶದ ಅರ್ಥ ವ್ಯವಸ್ಥೆಗೆ ಎದುರಾಗುತ್ತಿವೆ. ಹೀಗಾಗಿ, ದೇಶಕ್ಕೆ ಎಸ್ಬಿಐನಂಥ ಬ್ಯಾಂಕ್ಗಳು ಇನ್ನೂ 4-5 ಬೇಕು’ ಎಂದು ಹೇಳಿದ್ದಾರೆ.
ಕೊರೊನಾ ಅವಧಿಯಲ್ಲಿ ಬ್ಯಾಂಕಿಂಗ್ ಕ್ಷೇತ್ರ ಹೆಚ್ಚಿನ ಪ್ರಮಾಣದಲ್ಲಿ ಡಿಜಿಟಲ್ ವಹಿವಾಟುಗಳನ್ನೇ ಅವಲಂಬಿಸಿತ್ತು. ಅದರ ಪ್ರಮಾಣವೀಗ ಹೆಚ್ಚಾಗಿದೆ ಎಂದರು.
ಇದೇ ವೇಳೆ, ದೇಶದಲ್ಲಿ ಹೆಚ್ಚಿನ ಪ್ರಮಾಣದ ಆರ್ಥಿಕ ಚಟುವಟಿಕೆಗಳು ನಡೆಯುತ್ತಿದ್ದರೂ, ಹೆಚ್ಚಿನ ಜಿಲ್ಲೆಗಳಲ್ಲಿ ಬ್ಯಾಂಕ್ ವಹಿವಾಟು ಕಡಿಮೆಯಾಗಿದೆ. ಹೀಗಾಗಿ, ಐಬಿಎ ಬ್ಯಾಂಕ್ ಶಾಖೆಗಳು ಇಲ್ಲದ ಸ್ಥಳಗಳಲ್ಲಿ ವಹಿವಾಟು ನಡೆಸುವ ಬಗ್ಗೆ ಆಸಕ್ತಿ ವಹಿಸಬೇಕು ಎಂದು ವಿತ್ತ ಸಚಿವೆ ಮನವಿ ಮಾಡಿಕೊಂಡಿದ್ದಾರೆ. 2 ಸಾವಿರ ಮಂದಿ ಇರುವ ಗ್ರಾಮದಲ್ಲಿ ಕೂಡ ಬ್ಯಾಂಕ್ ಶಾಖೆ ಇರಬೇಕು ಎನ್ನುವುದು ಸರ್ಕಾರದ ಆಶಯ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments