ಸಾಲಕ್ಕಾಗಿ ದಂಪತಿ ಕೊಲೆ ಪ್ರಕರಣ: ಒಬ್ಬನ ಬಂಧನ

Webdunia
ಬುಧವಾರ, 27 ಏಪ್ರಿಲ್ 2016 (08:18 IST)
ಪುಲಕೇಶಿನಗರದಲ್ಲಿ ಕಳೆದ ಏಪ್ರೀಲ್ 21 ರಂದು ನಡೆದಿದ್ದ ದಂಪತಿಗಳ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಸಫಲರಾಗಿದ್ದಾರೆ. ಸಾಲ ನೀಡಲು ನಿರಾಕರಿಸಿದ್ದೇ ಈ ಹತ್ಯೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. 
 
ಕೋಲ್ಸ್ ರಸ್ತೆಯ ನಿವಾಸಿಗಳಾದ ಪರ್ವತರಾಜ್ (61) ಹಾಗೂ ಚಂದ್ರಕಲಾ (55) ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಚಂದ್ರಕಲಾ ಅವರ ಕತ್ತು ಕೊಯ್ದಿದ್ದರೆ, ಪರ್ವತರಾಜ್ ಅವರಿಗೆ 25 ಬಾರಿ ಇರಿದು ಕೊಲ್ಲಲಾಗಿತ್ತು. ಬಂಧಿತ ಆರೋಪಿಯನ್ನು ಪ್ರೇಮ್‌ಚಂದ್ ಜೈನ್ (35) ಎಂದು ಗುರುತಿಸಲಾಗಿದ್ದು ಇನ್ನೊಬ್ಬ ಆರೋಪಿ ಚಂದ್ರಶೇಖರ್ (36) ನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. 
 
ಆರೋಪಿ ಪ್ರೇಮ್‌ಚಂದ್ ವೃದ್ಧ ದಂಪತಿಗೆ 15 ವರ್ಷಗಳಿಂದ ಪರಿಚಯಸ್ಥನಾಗಿದ್ದು ಆತ್ಮೀಯ ಸಂಬಂಧವನ್ನು ಇಟ್ಟುಕೊಂಡಿದ್ದ. 
ತನ್ನ ಸ್ನೇಹಿತ ಚಂದ್ರಶೇಖರ್‌ನಿಗಾಗಿ 50 ಸಾವಿರ ರೂ ನೀಡುವಂತೆ ವೃದ್ಧ ದಂಪತಿಗಳ ಬಳಿ ಕೇಳಿಕೊಂಡಿದ್ದ. ಆದರೆ ಮಗನ ಮದುವೆಗೆ ತಯಾರಿ ನಡೆಸುತ್ತಿರುವುದರಿಂದ ಸಾಲ ನೀಡಲಾಗುವುದಿಲ್ಲ ಎಂದು ದಂಪತಿಗಳು ಹೇಳಿದ್ದರು. ಹೀಗಾಗಿ ಹಣ ಪಡೆಸಲು ಆರೋಪಿಗಳು ಕೊಲೆ ತಂತ್ರ ರೂಪಿಸಿದರು.
 
ದಂಪತಿಗಳ ಮಗನ ಮದುವೆಗೆಹಣ ಮತ್ತು ಚಿನ್ನಾಭರಣವನ್ನು ದಂಪತಿ ಸಂಗ್ರಹಿಸಿರಬೇಕು. ಇವರನ್ನು ಹತ್ಯೆ ಮಾಡಿದರೆ ಕೈ ತುಂಬ ಹಣ ಸಿಗುತ್ತದೆ ಎಂದು ಸ್ಕೆಚ್ ಹಾಕಿ ಇಬ್ಬರನ್ನು ಕೊಂದು  ಚಿನ್ನಾಭರಣ ಮತ್ತು ನಗದು ದೋಚಿದ್ದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ .

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments