Webdunia - Bharat's app for daily news and videos

Install App

ರೈಲಿಗೆ ತಲೆ ಕೊಟ್ಟ ಪ್ರೇಮಿಗಳು

Webdunia
ಸೋಮವಾರ, 6 ಜೂನ್ 2016 (08:42 IST)
ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಯುವ ಪ್ರೇಮಿಗಳಿಬ್ಬರು ತಮ್ಮ ಬದುಕಿಗೆ ದುರಂತ ಅಂತ್ಯ ನೀಡಿದ ಘಟನೆ ಮಹಾರಾಷ್ಟ್ರದ ಲಾತೂರ್‌ ಜಿಲ್ಲೆಯ ಚಾಕೂರ್‌ ರೈಲ್ವೆ ಸ್ಟೇಷನ್‌ ಬಳಿ ನಡೆದಿದೆ.

ರವಿವಾರ ಮಧ್ಯಾಹ್ನ 2 ಗಂಟೆಗೆ ಈ ಘಟನೆ ಸಂಭವಿಸಿದ್ದು, ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳನ್ನು ತುಳಸೀರಾಮ್(38) ಹಾಗೂ ಅರ್ಚನಾ ಘುಗೆ(20) ಎಂದು ಗುರುತಿಸಲಾಗಿದೆ. ತುಳಸೀರಾಮ ವಿವಾಹಿತನಾಗಿದ್ದು ಅರ್ಚನಾ ಬಿಎಸ್‌ಸಿ ವಿದ್ಯಾರ್ಥಿನಿಯಾಗಿದ್ದಳು. ಆಕೆ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದಳು. ಕಳೆ ವಾರ ಅವರಿಬ್ಬರ ಪ್ರೀತಿಯ ವಿಷಯ ಎರಡು ಕುಟುಂಬಸ್ಥರಿಗೂ ತಿಳಿದು ವಿರೋಧ ವ್ಯಕ್ತವಾಗಿತ್ತು. ಕಳೆದ ಐದು ದಿನಗಳಿಂದ ಪ್ರೇಮಿಗಳು ನಾಪತ್ತೆಯಾಗಿದ್ದು ಈಗ ಶವವಾಗಿ ಸಿಕ್ಕಿದ್ದಾರೆ. 
 
ಚಲಿಸುತ್ತಿರುವ ರೈಲಿನ ಮುಂದೆ ಜಿಗಿದ ತುಳಸೀರಾಮ್ ಶಿರ ಮತ್ತು ಮುಂಡ ಬೇರ್ಪಟ್ಟಿದ್ದು 20 ಮೀಟರ್ ದೂರ ಹೋಗಿ ಬಿದ್ದಿದೆ. ಮೃತ ಪಟ್ಟವರ ಬಳಿಯಲ್ಲಿ ಚಿನ್ನದ ಆಭರಣ, 3,000 ನಗದು ಮತ್ತು ಗುರುತಿನ ಚೀಟಿ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಗುರುತಿನ ಚೀಟಿ  ಪೊಲೀಸರು ಶವದ ಗುರುತು ಪತ್ತೆ ಹಚ್ಚಲು ನೆರವಾಯಿತು.
 
ತಾವಿಬ್ಬರು ಒಂದಾಗಿ ಬದುಕಲು ಕುಟುಂಬಸ್ಥರು ಬಿಡುವುದಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಊಹಿಸಲಾಗಿದ್ದು ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧು: 3,170 ಭಾರತೀಯರು ಇಸ್ರೇಲ್‌– ಇರಾನ್‌ನಿಂದ ತಾಯ್ನಾಡಿಗೆ

ಮೋಸ್ಟ್ ವಾಂಟೆಡ್‌ ಗ್ಯಾಂಗ್‌ಸ್ಟರ್‌ ರೂಮಿ ವೊಗ್ರಾ ಎನ್‌ಕೌಂಟರ್‌ನಲ್ಲಿ ಸಾವು

ಸಿದ್ದರಾಮಯ್ಯನವರೇ ಯಾವುದೇ ಕಾರಣಕ್ಕೂ ಡಿಕೆಶಿ ಕೈಗೆ ಕರ್ನಾಟಕವನ್ನು ನೀಡಬೇಡಿ: ಬಸನಗೌಡ ಪಾಟೀಲ್

ಕುಮಾರಸ್ವಾಮಿ ಪತ್ರಕ್ಕೆ ಸಿಕ್ತು ಕೇಂದ್ರದಿಂದ ಸ್ಪಂದನೆ: ಮಾವು ಬೆಳೆಗಾರರಿಗೆ ಗುಡ್‌ನ್ಯೂಸ್‌

ವಾಟ್ಸಾಪ್‌ ಸ್ಟೇಟಸ್‌ಗೆ ರೀಲ್ಸ್ ಅಪ್ಲೋಡ್ ಮಾಡಿದ್ದಕ್ಕೆ ಪ್ರಿಯಕರ ಕಿರಿಕಿರಿ: ಯುವತಿ ಸಾವಿಗೆ ಶರಣು

ಮುಂದಿನ ಸುದ್ದಿ
Show comments