Webdunia - Bharat's app for daily news and videos

Install App

ಮಕ್ಕಳನ್ನು ಮನೆಯಿಂದ ಹೊರಹಾಕಿ ಎಂದ ಕೋರ್ಟ್!?

Webdunia
ಶುಕ್ರವಾರ, 27 ಮೇ 2022 (07:06 IST)
ಡೆಹ್ರಾಡೂನ್ : ಪೋಷಕರಿಗೆ ಕಿರುಕುಳ ನೀಡುವ ಮತ್ತು ನಿಂದಿಸುವ ಮಕ್ಕಳನ್ನು ಮನೆಯಿಂದ ಹೊರಹಾಕಬೇಕು ಎಂದು ಹರಿದ್ವಾರದ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹೇಳಿದೆ.

ಪೋಷಕರಿಗೆ ಕಿರುಕುಳ ನೀಡುವ ಮಕ್ಕಳು ಒಂದೇ ತಿಂಗಳಲ್ಲಿ ಮನೆ ಖಾಲಿ ಮಾಡಬೇಕು. ಒಂದು ವೇಳೆ ಆದೇಶ ಪಾಲಿಸದಿದ್ದರೆ ಪೊಲೀಸರು ಕ್ರಮ ಕೈಗೊಳ್ಳುವಂತೆ ಹರಿದ್ವಾರ ಎಸ್ಡಿಎಂ ನ್ಯಾಯಾಲಯ ಸೂಚಿಸಿದೆ. 

ಉತ್ತರಾಖಂಡ ಹರಿದ್ವಾರದ ಜ್ವಾಲಾಪುರ, ಕಂಖಾಲ್ ಮತ್ತು ರಾವ್ಲಿ ಮೆಹದುದ್ ಸೇರಿ 6 ವೃದ್ಧ ದಂಪತಿ ತಮ್ಮ ಮಕ್ಕಳೇ ತಮ್ಮ ಮೇಲೆ ದೌರ್ಜನ್ಯ ಎಸಗಿದ್ದಾರೆ ಮತ್ತು ಹಲ್ಲೆ ನಡೆಸಿದ್ದಾರೆ ಎಂದು ಅರ್ಜಿ ಸಲ್ಲಿಸಿದ್ದರು. 

ಮಕ್ಕಳು ತಮ್ಮೊಂದಿಗೆ ವಾಸಿಸುತ್ತಿದ್ದರೂ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ನಮ್ಮ ಆರೋಗ್ಯ ಮತ್ತು ಆಹಾರದ ಬಗ್ಗೆ ಗಮನ ಹರಿಸುವುದಿಲ್ಲ. ಆಗಾಗ್ಗೆ ನಮ್ಮ ಮೇಲೆ ಹಲ್ಲೆ ಮಾಡುತ್ತಾರೆ. ಇದರಿಂದ ನಮ್ಮ ಜೀವನ ನರಕವಾಗಿದೆ. ಆದ್ದರಿಂದ ಪೋಷಕರ ಸ್ಥಿರ ಮತ್ತು ಚರಾಸ್ತಿಗಳಿಂದ ಮಕ್ಕಳನ್ನು ಹೊರ ಹಾಕಬೇಕೆಂದು ಮನವಿಯಲ್ಲಿ ಕೋರಿದ್ದರು.

ಈ ಕುರಿತು ವಿಚಾರಣೆ ನಡೆಸಿ, ಎಸ್ಡಿಎಂ ನ್ಯಾಯಾಲಯದ ನ್ಯಾಯಾಧೀಶ ಪುರಾನ್ ಸಿಂಗ್ ರಾಣಾ ಅವರು, ತಮ್ಮ ಪೋಷಕರ ಸ್ಥಿರ ಮತ್ತು ಚರಾಸ್ತಿಯಿಂದ ಮಕ್ಕಳನ್ನು ಹೊರಹಾಕುವಂತೆ ಆದೇಶಿದಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments