Webdunia - Bharat's app for daily news and videos

Install App

ಸತ್ತಿದ್ದಾನೆಂದು ತಿಳಿದು ಮಣ್ಣು ಮಾಡಿದ್ದ ಕೊವಿಡ್ ರೋಗಿ ವಾರದೊಳಗೇ ಮನೆಯಲ್ಲಿ ಪ್ರತ್ಯಕ್ಷವಾಗಬೇಕೇ?!

Webdunia
ಸೋಮವಾರ, 23 ನವೆಂಬರ್ 2020 (10:04 IST)
ಕೋಲ್ಕೊತ್ತಾ: ಕೊವಿಡ್ ಸೋಂಕಿಗೊಳಗಾಗಿ ಆಸ್ಪತ್ರೆ ಸೇರಿದ್ದ ವೃದ್ಧನನ್ನು ಮೃತಪಟ್ಟಿದ್ದಾನೆಂದು ಘೋಷಿಸಿದ್ದ ಆಸ್ಪತ್ರೆ ಸಿಬ್ಬಂದಿ ಆತನ ಶವವನ್ನು ಮನೆಯವರಿಗೆ ಹಸ್ತಾಂತರಿಸಿದ್ದರು. ಅದರಂತೆ ಮನೆಯವರೂ ಅಂತ್ಯಸಂಸ್ಕಾರ ಮಾಡಿದ್ದರು. ಆದರೆ ಇದಾದ ವಾರದ ಬಳಿಕ ಆ ವ್ಯಕ್ತಿ ದುತ್ತನೆ ಎದುರಿಗೆ ಪ್ರತ್ಯಕ್ಷವಾದರೆ ಹೇಗಾಗಿರಬೇಡ?


ಇದು ನಡೆದಿರುವುದು ಪಶ್ಚಿಮ ಬಂಗಾಲದಲ್ಲಿ. ಆಸ್ಪತ್ರೆಯ ಬೇಜವಾಬ್ಧಾರಿಯಿಂದ ಈ ಘಟನೆ ಸಂಭವಿಸಿದೆ. ವೃದ್ಧ ಮೃತಪಟ್ಟಿರುವುದಾಗಿ ತಪ್ಪಾಗಿ ವರದಿ ನೀಡಿದ್ದ ಆಸ್ಪತ್ರೆ ಸಿಬ್ಬಂದಿ ಬೇರೊಬ್ಬರ ಶವವನ್ನು ಮನೆಯವರಿಗೆ ನೀಡಿದ್ದರು. ಅದರಂತೆ ಯಾರದ್ದೋ ಶವದ ಅಂತ್ಯಸಂಸ್ಕಾರವನ್ನು ಮನೆಯವರು ಮಾಡಿದ್ದರು. ಇನ್ನೇನು ಆತನ ಶ್ರಾದ್ಧ ಸಂಸ್ಕಾರವನ್ನು ಮಾಡುತ್ತಿರುವಾಗ ಆಸ್ಪತ್ರೆ ಸಿಬ್ಬಂದಿ ತಮ್ಮ ಪ್ರಮಾದದ ಬಗ್ಗೆ ಫೋನ್ ಮಾಡಿ ತಿಳಿಸಿದ್ದು, ತಕ್ಷಣವೇ ಆಸ್ಪತ್ರೆಗೆ ತೆರಳಿದ ಕುಟುಂಬಸ್ಥರು ವೃದ್ಧನನ್ನು ಮನೆಗೆ ಕರೆತಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments