Webdunia - Bharat's app for daily news and videos

Install App

ಗೋವು ಹಿಂದೂಗಳಿಗೆ ಮಾತ್ರವಲ್ಲ, ಮುಸ್ಲಿಮರಿಗೂ ತಾಯಿ

Webdunia
ಬುಧವಾರ, 24 ಆಗಸ್ಟ್ 2016 (11:25 IST)
ಆಕಳು ಕೇವಲ ಹಿಂದೂಗಳಿಗೆ ಮಾತ್ರವಲ್ಲ, ಮುಸ್ಲಿಂ ಧರ್ಮದವರಿಗೂ ತಾಯಿ ಎಂದು ದ್ವಾರಕಾಶಾರದಾ ಪೀಠಾಧೀಶ್ವರ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಮಂಗಳವಾರ ಹೇಳಿದ್ದಾರೆ.

ಗೋವಿನ ಹಾಲು ಅದನ್ನು ಪೂಜಿಸುವವರಿಗಷ್ಟೇ ಅಲ್ಲ ಇತರರಿಗೂ ಉಪಯುಕ್ತ. ಈ ತಾಯಿಯ ಹಾಲು ಕುಡಿದು ಹಿಂದೂಗಳಿಗೆ ಎಷ್ಟು ಪ್ರೋಟಿನ್ ಸಿಗುತ್ತದೆಯೋ ಮುಸ್ಲಿಮರಿಗೂ ಅಷ್ಟೇ ಸಿಗುತ್ತದೆ. ಹೀಗಾಗಿ ಆಕಳು ನಮಗಷ್ಟೇ ಅಲ್ಲ, ಮುಸ್ಲಿಂ ಧರ್ಮದವರಿಗೂ ತಾಯಿ ಎಂದು ಹೇಳುವುದು ಸಂಪೂರ್ಣವಾಗಿ ಸರಿ ಎಂದು ಸ್ವಾಮಿ ಪ್ರತಿಪಾದಿಸಿದ್ದಾರೆ.
 
ಆಕಳನ್ನು ರಕ್ಷಿಸುವುದು ಎಲ್ಲ ಭಾರತೀಯರ ಕರ್ತವ್ಯ. ಅವರು ಯಾವ ಧರ್ಮಕ್ಕೆ ಸೇರಿದವರು ಎಂಬ ಪ್ರಶ್ನೆ ಇಲ್ಲಿ ಏಳುವುದಿಲ್ಲ. ದೇಶದ ವಿವಿಧ ಭಾಗಗಳಲ್ಲಿ ಗೋ ಹತ್ಯೆಯನ್ನು ತಪ್ಪಿಸಲು ಏಕರೂಪವಾದ ಕಾನೂನು ಜಾರಿಗೆ ಬರಬೇಕು. ಇದರಲ್ಲಿ ಯಾವುದೇ ತಪ್ಪಿಲ್ಲ. ಎಂದು ಅವರು ಆಗ್ರಹಿಸಿದ್ದಾರೆ.
 
ಗೋ ಹತ್ಯೆ ಕಾನೂನಿನ ವಿರುದ್ಧ  ಅನೇಕ ಬಾರಿ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ. ಆದರೆ ಅವು ಯಾವಾಗಲೂ ತಿರಸ್ಕರಿಸಲ್ಪಟ್ಟಿವೆ ಎಂದು ಅವರು ಖೇದ ವ್ಯಕ್ತ ಪಡಿಸಿದ್ದಾರೆ.
 
ಆಕಳ ಉಪಯುಕ್ತತೆ ಬಗ್ಗೆ ಮಾತನಾಡಿದ ಅವರು, ಆಕೆಯ ಹಾಲಿನಿಂದ ಕೇವಲ ಪೋಷ್ಟಿಕಾಂಶಗಳು ಸಿಗುವುದಷ್ಟೇ ಅಲ್ಲ. ಗೋಮೂತ್ರದಿಂದ ಅನೇಕ ಕಾಯಿಲೆಗಳನ್ನು ಕಡಿಮೆ ಮಾಡಬಹುದು. ಸಾವಿನ ನಂತರ ಅದರ ಎಲುಬು ಮತ್ತು ಚರ್ಮ ಕೂಡ ಬಹಳ ಪ್ರಯೋಜನಕಾರಿ ಎಂದ ಅವರು ಗೋಮಾಂಸ ಮಾರಾಟವನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments