Select Your Language

Notifications

webdunia
webdunia
webdunia
webdunia

ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ಸ್ವೀಕರಿಸಿದ ರಾಧಾಕೃಷ್ಣನ್

CP Radhakrishnan

Krishnaveni K

ನವದೆಹಲಿ , ಶುಕ್ರವಾರ, 12 ಸೆಪ್ಟಂಬರ್ 2025 (11:50 IST)
ನವದೆಹಲಿ: ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ ಇಂದು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ಬೋಧಿಸಿದರು. ತಮಿಳುನಾಡು ಮೂಲದವರಾದ ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ 15 ನೇ ಉಪರಾಷ್ಟ್ರಪತಿಯಾದರು. ಜಗದೀಪ್ ಧನ್ಕರ್ ದಿಡೀರ್ ರಾಜೀನಾಮೆ ಬಳಿಕ ಹೊಸದಾಗಿ ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆದಿತ್ತು.

ಈ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ ರೆಡ್ಡಿ ಅವರನ್ನು 152 ಮತಗಳ ಅಂತರದಿಂದ ಮಣಿಸಿದ ಎನ್ ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಗೆಲುವು ಸಾಧಿಸಿದ್ದರು. ಇದಕ್ಕೆ ಮೊದಲು ಅವರು ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದರು.

ಇಂದಿನ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಶಾ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಗಣ್ಯರು ಆಗಮಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ