Webdunia - Bharat's app for daily news and videos

Install App

ಹುಡುಗಿಯರೇ ರಾಹುಲ್ ಗಾಂಧಿ ಬಳಿ ಹೋಗುವ ಮೊದಲು ಹುಷಾರ್!

Webdunia
ಬುಧವಾರ, 31 ಮಾರ್ಚ್ 2021 (09:02 IST)
ಕೊಚ್ಚಿ: ಕೇರಳ ವಿಧಾನಸಭೆ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಆಡಳಿತಾರೂಢ ಸಿಪಿಎಂ ಪಕ್ಷದ ಮಾಜಿ ಸಂಸದ ಜೋಯ್ಸ್ ಜಾರ್ಜ್ ನೀಡಿದ ಹೇಳಿಕೆಯೊಂದು ಈಗ ವಿವಾದಕ್ಕೆ ಕಾರಣವಾಗಿದೆ.


ಚುನಾವಣಾ ಪ್ರಚಾರ ವೇಳೆ ಜೋಯ್ಸ್ ‘ಮಹಿಳೆಯರೇ ರಾಹುಲ್ ಗಾಂಧಿ ಬಳಿ ಹೋಗುವ ಮೊದಲು ಹುಷಾರ್. ಅವರಿಗಿನ್ನೂ ಮದುವೆಯಾಗಿಲ್ಲ’ ಎಂದು ಕಿಚಾಯಿಸಿದ್ದರು. ಕೆಲವು ದಿನಗಳ ಹಿಂದೆ ರಾಹುಲ್ ಕೊಚ್ಚಿಯ ಕಾಲೇಜೊಂದರಲ್ಲಿ ಮಹಿಳೆಯರಿಗೆ ಒತ್ತಡ ತಡೆದುಕೊಳ್ಳುವ ಶಕ್ತಿ ಹೇಗಿರುತ್ತದೆ ಎಂದು ಪ್ರಾತ್ಯಕ್ಷಿಕೆ ಮೂಲಕ ಮಾಡಿ ತೋರಿಸಿದ್ದರು. ಇದನ್ನು ಉಲ್ಲೇಖಿಸಿ ಜೋಯ್ಸ್ ವ್ಯಂಗ್ಯ ಮಾಡಿದ್ದಾರೆ.

‘ರಾಹುಲ್ ಗಾಂಧಿ ಯಾವತ್ತೂ ಮಹಿಳೆಯರ ಕಾಲೇಜಿನಲ್ಲೇ ಕಾರ್ಯಕ್ರಮ ಹಾಕಿಕೊಳ್ಳುತ್ತಾರೆ. ಹುಡುಗಿಯರಿಗೆ ಹೇಗೆ ನಿಲ್ಲಬೇಕು, ಕೂರಬೇಕು ಎಂದು ಕಲಿಸುತ್ತಾರೆ. ನನ್ನ ಪ್ರೀತಿಯ ಮಕ್ಕಳೇ.. ಅವರ ಬಳಿ ಹೋಗಬೇಡಿ. ಅಂತಹ ಕೆಲಸ ಮಾಡಬೇಡಿ. ಅವರಿಗಿನ್ನೂ ಮದುವೆಯಾಗಿಲ್ಲ’ ಎಂದಿದ್ದಾರೆ.

ಇದು ಕಾಂಗ್ರೆಸ್ ಆಕ್ರೋಶಕ್ಕೆ ಕಾರಣವಾಗಿದೆ. ತಮ್ಮ ನಾಯಕನ ವಿರುದ್ಧ ಇಂತಹ ಕೀಳು ಹೇಳಿಕೆ ಕೊಟ್ಟ ನಾಯಕನನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments