Webdunia - Bharat's app for daily news and videos

Install App

ಉತ್ತರ ಪ್ರದೇಶದಲ್ಲಿ ಮಹಿಳೆಯನ್ನೇ ಹರಾಜು ಮಾಡಲಾಗಿದೆ

Webdunia
ಶನಿವಾರ, 26 ಜುಲೈ 2014 (17:50 IST)
ಉತ್ತರ ಪ್ರದೇಶದ ಬುಂದೇಲ್‌ಖಂಡ್‌ದ ಮಝಗವಾ ಠಾಣಾ ಕ್ಷೇತ್ರದ ಜರಾಖರ್‌ ಗ್ರಾಮದಲ್ಲಿ ಮಹಿಳೆಯೊಬ್ಬಳನ್ನು ಹರಾಜಿನಲ್ಲಿ ಮಾರಾಟ ಮಾಡಿದ ಹೇಯ ಘಟನೆ ವರದಿಯಾಗಿದೆ. 
 
ಗ್ರಾಮದ ದಲಿತ ಕೇರಿಯ ಯುವಕ ಶ್ಯಾಮಲಾಲ್ ಕೆಲ ದಿನಗಳ ಹಿಂದೆ ಓರಿಸ್ಸಾದಿಂದ ಮಹಿಳೆಯನ್ನು ಖರೀದಿಸಿ ಗ್ರಾಮಕ್ಕೆ ಕರೆದುಕೊಂಡು ಬಂದಿದ್ದ.. ಗ್ರಾಮಕ್ಕೆ ಬಂದು ಮಹಿಳೆಯನ್ನು ಮತ್ತೆ ಮಾರಾಟ ಮಾಡುವ ಪ್ರಯತ್ನ ಮಾಡಿದಾಗ ಮಹಿಳೆಯನ್ನು ಖರೀದಿಸಲು ಕೆಲವರು ಮುಂದೆ ಬಂದಿದ್ದಾರೆ. ಆಗ ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯನ್ನು ಹರಾಜು ಮಾಡುವ ನಿರ್ಧಾರಕ್ಕೆ ಬಂದಿದ್ದಾನೆ. 
 
ಗ್ರಾಮದಲ್ಲಿರುವ ಕಲ್ಯಾಣ ಮಂಟಪದಲ್ಲಿ ಸುಮಾರು 50 ಜನರು ಜಮಾಯಿಸಿದ್ದಾರೆ. ಇವರ ಮಧ್ಯದಲ್ಲಿ ಮಹಿಳೆಯನ್ನು ನಿಲ್ಲಿಸಿ ಹರಾಜು ಕೂಗಲಾಗಿದೆ. ಹರಾಜು ಕೂಗಿದ ಮೂರು ಜನರಲ್ಲಿ ಇಬ್ಬರ ವಯಸ್ಸು ಹೆಚ್ಚಾಗಿದ್ದರಿಂದ ಮಹಿಳೆ ಅವರ ಜೊತೆ ಹೋಗಲು ನಿರಾಕರಿಸಿದ್ದಾಳೆ. ಮೂರನೆ ವ್ಯಕ್ತಿ ಹರಾಜಿನಲ್ಲಿ ಗರಿಷ್ಠ 25 ಸಾವಿರ ರೂಪಾಯಿಗಳನ್ನು ನೀಡಿ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾನೆ. ಮಹಿಳೆಯ ಹರಾಜಿನ ಘಟನೆ ಕುರಿತಂತೆ ಪೋಲಿಸರು ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments