Webdunia - Bharat's app for daily news and videos

Install App

ಕುಟುಂಬವನ್ನು ಕಾಪಾಡಲು ತನ್ನ ಶೀಲವನ್ನೇ ಕಳೆದುಕೊಂಡ ಯುವತಿ

Webdunia
ಶನಿವಾರ, 26 ಜುಲೈ 2014 (18:53 IST)
ಸರ್ಕಾರಗಳ ನಿರಂತರ ಪ್ರಯತ್ನಗಳ ಮಧ್ಯೆಯೂ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅತ್ಯಾಚಾರ ಮತ್ತು ಅಪರಾಧಗಳು ನಿಲ್ಲುವಂತೆ ಕಾಣುತ್ತಿಲ್ಲ. ಪಂಜಾಬ್‌ನ ಲೂಧಿಯಾನಾದಲ್ಲಿ ಯುವಕನೊಬ್ಬ, ಯುವತಿಗೆ ಆಸಿಡ್‌ ದಾಳಿ ನಡೆಸುವುದಲ್ಲದೇ ನಿನ್ನ ಪರಿವಾರದವರನ್ನು ಕೊಲ್ಲುತ್ತೇನೆ ಎಂದು ಬೆದರಿಕೆಯೊಡ್ಡಿ ಯುವತಿಯ ಮೇಲೆ ಸತತ ಏಳು ದಿನಗಳವರೆಗೆ ಅತ್ಯಾಚಾರ ಮಾಡಿದ ಹೃದಯವಿದ್ರಾವಕ ಘಟನೆ ವರದಿಯಾಗಿದೆ. 
 
ಪೀಡಿತೆ ಜೋಧೆವಾಲದ ಧಾರ್ಮಿಕ ಸ್ಥಳದಲ್ಲಿ ದೇವರ ದರ್ಶನಕ್ಕಾಗಿ ತೆರಳಿದ್ದಾಳೆ. ದರ್ಶನ ಮುಗಿಸಿಕೊಂಡು ಮನೆಗೆ ತೆರಳಲು ಅಟೋದಲ್ಲಿ ಕುಳಿತಿದ್ದಾಗ ಅಟೋದೊಳಗಡೆ ನುಸುಳಿದ ಆರೋಪಿ ನನ್ನೊಂದಿಗೆ ಸಹಕರಿಸದಿದ್ದರೆ ನಿನ್ನ ಮೇಲೆ ಆಸಿಡ್ ಎರಚುವುದಲ್ಲದೇ ನಿನ್ನ ಕುಟುಂಬದವರನ್ನು ಸಾಯಿಸುವುದಾಗಿ ಬೆದರಿಸಿದ್ದಾನೆ ಎಂದು ಯುವತಿ ಪೋಲಿಸರಿಗೆ ತಿಳಿಸಿದ್ದಾಳೆ. 
 
ಆರೋಪಿ ಆಕೆಯ ಜೊತೆ ಶಾಲೆಯಲ್ಲಿ ಓದುತ್ತಿದ್ದನು ಎಂದೆನ್ನಲಾಗಿದೆ. ಆರೋಪಿ ಆಕೆಗೆ ಬಲವಂತಾಗಿ ಕೋಲ್ಡ್‌ ಡ್ರಿಂಕ್ಸ್‌‌ ಕುಡಿಸಿ ಪ್ರಜ್ಞೆ ತಪ್ಪಿಸಿದ್ದಾನೆ. ಯುವತಿಗೆ ಪ್ರಜ್ಞೆ ಬಂದ ಬಳಿಕೆ ನೋಡಿದರೆ ಆಕೆಯ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದಾನೆ. ಯುವತಿ ವಿರೊಧ ವ್ಯಕ್ತಪಡಿಸಿದಾಗ ಆಕೆಯ ಮೇಲೆ ಹಲ್ಲೆ ಮಾಡಿದ್ದಾನೆ. ಯುವತಿ ಆತ್ಮ ಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದಾಗ ಆಕೆಯನ್ನು ಆತ ಯುವತಿಯ ಮನೆ ಹತ್ತಿರ ಬಿಟ್ಟು ಪರಾರಿಯಾಗಿದ್ದಾನೆ. ಯುವತಿಯಿಂದ ಮಾಹಿತಿ ಪಡೆದುಕೊಂಡ ಪೋಲಿಸರು ದೂರು ದಾಖಲಿಸಿಕೊಂಡಿದ್ದಾರೆ ಮತ್ತು ದಿಬ್ಬಾ ರೋಡ್‌‌ನ ರಾಮಫೂಲ್‌‌ನನ್ನು ಬಂಧಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments