Webdunia - Bharat's app for daily news and videos

Install App

ಅಯೋಧ್ಯೆಯಲ್ಲಿ ಪ್ರತಿಷ್ಠಾ ಮಹೋತ್ಸವಕ್ಕೆ ಜನಸಾಗರ: ಶ್ರೀರಾಮನ ಭಕ್ತಿಯಲ್ಲಿ ಮಿಂದೆದ್ದ ಭಕ್ತಗಣ

Sampriya
ಶನಿವಾರ, 11 ಜನವರಿ 2025 (20:21 IST)
Photo Courtesy X
ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವ ಸಂಭ್ರಮದಿಂದ ನಡೆಯುತ್ತಿದೆ. ಇಂದು ರಾಮಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಿತು.

ಪ್ರತಿಷ್ಠಾ ದ್ವಾದಶಿಯಂದು ಬಾಲರಾಮಮೂರ್ತಿಗೆ ಮಹಾ ಅಭಿಷೇಕ ಮಾಡಲಾಯಿತು. ನಂತರ ಅವರ ಮಂಗಲ ದರ್ಶನ ನಡೆಯಿತು. ಈ ವಿಶೇಷ ದಿನದಂದು ರಾಮಮಂದಿರವನ್ನು ಭವ್ಯವಾಗಿ ಅಲಂಕರಿಸಲಾಗಿತ್ತು. ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ರಾಮಲಲ್ಲಾನ ದರ್ಶನ ಪಡೆದರು.  

ಅಯೋಧ್ಯೆಯಲ್ಲಿ ಹಬ್ಬದ ವಾತಾವರಣವೇ ಇತ್ತು. ಭಕ್ತರು ನೃತ್ಯ ಮಾಡುತ್ತಾ ಮತ್ತು ಹಾಡುತ್ತ ಮೆರವಣಿಗೆ ಸಾಗಿ ರಾಮಲಲ್ಲಾನ ಆಸ್ಥಾನಕ್ಕೆ ಬಂದ ದೃಶ್ಯಗಳು ಕಂಡುಬಂದವು. ಎಲ್ಲರೂ ಶ್ರೀರಾಮನ ಭಕ್ತಿಯಲ್ಲಿ ಮಿಂದೆದ್ದರು. ಆರಾಧ್ಯ ದೈವ ರಾಮನ ದರ್ಶನಕ್ಕೆ ಕುಟುಂಬ ಸಮೇತರಾಗಿ ಭಕ್ತರು ಆಗಮಿಸಿದ್ದರು.
 

ಧಾರ್ಮಿಕ ಕಾರ್ಯಗಳಲ್ಲಿ, ದೇವರಿಗೆ ನೈವೇದ್ಯ ಅರ್ಪಿಸಲಾಯಿತು. ಇದಾದ ನಂತರ ಮಹಾ ಆರತಿ ಮಾಡಲಾಯಿತು. ನಂತರ ದೇವಾಲಯದ ಬಾಗಿಲುಗಳನ್ನು ಮುಚ್ಚಲಾಯಿತು. ರಾಜಭೋಗ್ ಪ್ರಕ್ರಿಯೆ ಪೂರ್ಣಗೊಂಡ ನಂತರ, ರಾಮಲಲ್ಲಾ ವಿರಾಜಮಾನನಾಗಿರುವ ಗರ್ಭಗುಡಿಯ ಬಾಗಿಲು ತೆರೆಯಲಾಯಿತು. ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರ ನೇತೃತ್ವದಲ್ಲಿ ಮಹಾ ಆರತಿ ನೆರವೇರಿಸಲಾಯಿತು. ಮಹಾ ಆರತಿಯಲ್ಲಿ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು.  

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಮ ಮಂದಿರ ಸಂಕೀರ್ಣದ ಅಂಗದ್ ತಿಲಾದಲ್ಲಿ ಪ್ರತಿಷ್ಠಾ ದ್ವಾದಶಿ ಸಮಾರಂಭವನ್ನು ಉದ್ಘಾಟಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments