Webdunia - Bharat's app for daily news and videos

Install App

ಕಿರುಕುಳ ಸಹಿಸಲಾಗುತ್ತಿಲ್ಲ ದಯಮಾಡಿ ಸಹಾಯ ಮಾಡಿ ಎಂದು ರಾಜ್ ನಾಥ್ ಸಿಂಗ್ ಗೆ ಪತ್ರ ಬರೆದ ಸಿಆರ್ ಪಿಎಫ್ ಯೋಧ

Webdunia
ಮಂಗಳವಾರ, 7 ಫೆಬ್ರವರಿ 2017 (13:46 IST)
ನವದೆಹಲಿ: ಇತ್ತೀಚೆಗೆ ಮೇಲಧಿಕಾರಿಗಳ ಹಿಂಸೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಕಟಿಸಿ ಯೋಧರು ಸುದ್ದಿ ಮಾಡುತ್ತಿದ್ದರೆ, ಇಲ್ಲೊಬ್ಬ ಯೋಧ ನೇರವಾಗಿ ಗೃಹ ಸಚಿವ ರಾಜ್ ನಾಥ್ ಸಿಂಗ್ ಗೆ ಪತ್ರ ಬರೆದಿದ್ದಾರೆ.
 

ಬಿಹಾರ ಮೂಲದ ಸಿಆರ್ ಪಿಎಫ್ ಯೋಧ ಸಂಜೀವ್ ರಂಜನ್ ಸಿಂಗ್ ಮೇಲಧಿಕಾರಿಗಳ ಕಿರುಕುಳ ಸಹಿಸಲಾಗುತ್ತಿಲ್ಲ. ದಯಮಾಡಿ ಸಹಾಯ ಮಾಡಿ ಎಂದು ಪತ್ರ ಬರೆದಿದ್ದಾರೆ.  ರಜೆಯ ಮೇಲೆ ತೆರಳಿದ್ದ ರಂಜನ್ ಜನವರಿ 23 ರಂದು ಕರ್ತವ್ಯಕ್ಕೆ ಹಾಜರಾಗಬೇಕಿತ್ತು.

ಆದರೆ ತಡವಾಗಿ ಹಾಜರಾಗಿದ್ದಕ್ಕೆ ಅಧಿಕಾರಿಗಳು ಇನ್ನಿಲ್ಲದಂತೆ ತೊಂದರೆ ಕೊಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ತವರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಂಜನ್ ರನ್ನು ಕೆಲವು ದಿನಗಳ ಮಟ್ಟಿಗೆ ತೆಲಂಗಾಣ ಜಿಲ್ಲೆಗೆ ವರ್ಗಾಯಿಸಲಾಗಿತ್ತು. ಆದರೆ ನಾನು ನನ್ನ ತಾಯಿ, ಪತ್ನಿ ಮತ್ತು ಮಗನನ್ನು ಕಳೆದುಕೊಂಡಿದ್ದೇನೆ. ಅವರನ್ನು ಸರಿಯಾಗಿ ನೋಡಿಕೊಳ್ಳಲೂ ನನ್ನಿಂದಾಗಲಿಲ್ಲ.

ಮತ್ತೆ ಮೊದಲಿನ ಸ್ಥಳಕ್ಕೇ ನನ್ನನ್ನು ವರ್ಗ ಮಾಡಿ ಎಂದು ಕೇಳಿಕೊಂಡರೂ ಮೇಲಧಿಕಾರಿಗಳು ಕಿವಿ ಮೇಲೆ ಹಾಕಿಕೊಂಡಿಲ್ಲ. ನನ್ನ ಜತೆ ಮೇಲಧಿಕಾರಿಗಳು ಅನುಚಿತವಾಗಿ ವರ್ತಿಸಿದರು ಎಂಬುದು ಯೋಧನ ಆರೋಪ.

ಆದರೆ ಇದನ್ನು ನಿರಾಕರಿಸಿರುವ ಸಿಆರ್ ಪಿಎಫ್ ಕಮಾಂಡೆಂಟ್ ಧೀರೇಂದ್ರ ವರ್ಮಾ ಆತನ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಆತನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments