Webdunia - Bharat's app for daily news and videos

Install App

ಕಿರುಕುಳ ಸಹಿಸಲಾಗುತ್ತಿಲ್ಲ ದಯಮಾಡಿ ಸಹಾಯ ಮಾಡಿ ಎಂದು ರಾಜ್ ನಾಥ್ ಸಿಂಗ್ ಗೆ ಪತ್ರ ಬರೆದ ಸಿಆರ್ ಪಿಎಫ್ ಯೋಧ

Webdunia
ಮಂಗಳವಾರ, 7 ಫೆಬ್ರವರಿ 2017 (13:46 IST)
ನವದೆಹಲಿ: ಇತ್ತೀಚೆಗೆ ಮೇಲಧಿಕಾರಿಗಳ ಹಿಂಸೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಕಟಿಸಿ ಯೋಧರು ಸುದ್ದಿ ಮಾಡುತ್ತಿದ್ದರೆ, ಇಲ್ಲೊಬ್ಬ ಯೋಧ ನೇರವಾಗಿ ಗೃಹ ಸಚಿವ ರಾಜ್ ನಾಥ್ ಸಿಂಗ್ ಗೆ ಪತ್ರ ಬರೆದಿದ್ದಾರೆ.
 

ಬಿಹಾರ ಮೂಲದ ಸಿಆರ್ ಪಿಎಫ್ ಯೋಧ ಸಂಜೀವ್ ರಂಜನ್ ಸಿಂಗ್ ಮೇಲಧಿಕಾರಿಗಳ ಕಿರುಕುಳ ಸಹಿಸಲಾಗುತ್ತಿಲ್ಲ. ದಯಮಾಡಿ ಸಹಾಯ ಮಾಡಿ ಎಂದು ಪತ್ರ ಬರೆದಿದ್ದಾರೆ.  ರಜೆಯ ಮೇಲೆ ತೆರಳಿದ್ದ ರಂಜನ್ ಜನವರಿ 23 ರಂದು ಕರ್ತವ್ಯಕ್ಕೆ ಹಾಜರಾಗಬೇಕಿತ್ತು.

ಆದರೆ ತಡವಾಗಿ ಹಾಜರಾಗಿದ್ದಕ್ಕೆ ಅಧಿಕಾರಿಗಳು ಇನ್ನಿಲ್ಲದಂತೆ ತೊಂದರೆ ಕೊಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ತವರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಂಜನ್ ರನ್ನು ಕೆಲವು ದಿನಗಳ ಮಟ್ಟಿಗೆ ತೆಲಂಗಾಣ ಜಿಲ್ಲೆಗೆ ವರ್ಗಾಯಿಸಲಾಗಿತ್ತು. ಆದರೆ ನಾನು ನನ್ನ ತಾಯಿ, ಪತ್ನಿ ಮತ್ತು ಮಗನನ್ನು ಕಳೆದುಕೊಂಡಿದ್ದೇನೆ. ಅವರನ್ನು ಸರಿಯಾಗಿ ನೋಡಿಕೊಳ್ಳಲೂ ನನ್ನಿಂದಾಗಲಿಲ್ಲ.

ಮತ್ತೆ ಮೊದಲಿನ ಸ್ಥಳಕ್ಕೇ ನನ್ನನ್ನು ವರ್ಗ ಮಾಡಿ ಎಂದು ಕೇಳಿಕೊಂಡರೂ ಮೇಲಧಿಕಾರಿಗಳು ಕಿವಿ ಮೇಲೆ ಹಾಕಿಕೊಂಡಿಲ್ಲ. ನನ್ನ ಜತೆ ಮೇಲಧಿಕಾರಿಗಳು ಅನುಚಿತವಾಗಿ ವರ್ತಿಸಿದರು ಎಂಬುದು ಯೋಧನ ಆರೋಪ.

ಆದರೆ ಇದನ್ನು ನಿರಾಕರಿಸಿರುವ ಸಿಆರ್ ಪಿಎಫ್ ಕಮಾಂಡೆಂಟ್ ಧೀರೇಂದ್ರ ವರ್ಮಾ ಆತನ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಆತನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments