Webdunia - Bharat's app for daily news and videos

Install App

ಎಐಡಿಎಂಕೆ ನಿರ್ಣಾಯಕ ಸಭೆ; ಪನ್ನೀರ್ ಸ್ಥಾನಕ್ಕೇರುತ್ತಾರಾ ಶಶಿಕಲಾ?

Webdunia
ಭಾನುವಾರ, 5 ಫೆಬ್ರವರಿ 2017 (10:55 IST)
ಇಂದು ಎಐಡಿಎಂಕೆ ಪಕ್ಷದ ನಿರ್ಣಾಯಕ ಸಭೆ ನಡೆಯಲಿದ್ದು, ಪನ್ನೀರ್ ಸೆಲ್ವಂ ಅವರ ಸ್ಥಾನಕ್ಕೆ ಶಶಿಕಲಾ ಅವರನ್ನೇರಿಸುವ ಸಾಧ್ಯತೆಗಳು ದಟ್ಟವಾಗಿವೆ. ಜಯಲಲಿತಾ ನಿಧನದ ಬಳಿಕ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೇರಿದ್ದ ಶಶಿಕಲಾ ಮುಖ್ಯಮಂತ್ರಿ ಸ್ಥಾನಕ್ಕೇರುತ್ತಿರುವುದು ನಿರೀಕ್ಷಿತ ಬೆಳವಣಿಗೆ.
ತಮಿಳುನಾಡು ಮುಖ್ಯಮಂತ್ರಿಯಾಗಿ ಸೋಮವಾರ ಚಿನ್ನಮ್ಮ ಅಧಿಕಾರ ಸ್ವೀಕಾರ..?
ಪಕ್ಷದ ಕೆಲ ಮೂಲಗಳ ಪ್ರಕಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಪನ್ನೀರ್ ಸೆಲ್ವಂ ಶಶಿಕಲಾ ಅವರ ಹಾದಿಯನ್ನು ಸುಗಮಗೊಳಿಸಲಿದ್ದಾರೆ. ಬಂದಿರುವ ಮಾಹಿತಿಗಳಲ್ಲಿ ನಿಜಾಂಶವಿದ್ದಲ್ಲಿ ಫೆಬ್ರವರಿ 8 ಅಥವಾ 9 ರಂದು ಶಶಿಕಲಾ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. 
 
ಕೆಲವು ವರದಿಗಳ ಪ್ರಕಾರ ಜನವರಿ ತಿಂಗಳಲ್ಲಿಯೇ ಶಶಿಕಲಾ ಮುಖ್ಯಮಂತ್ರಿ ಸ್ಥಾನಕ್ಕೇರಬೇಕಿತ್ತು. ಆದರೆ ರಾಜ್ಯದಲ್ಲಿ ಜಲ್ಲಿಕಟ್ಟುಗಾಗಿ ವ್ಯಾಪಕ ಪ್ರತಿಭಟನೆ ನಡೆಯುತ್ತಿದ್ದರಿಂದ ಈ ಬೆಳವಣಿಗೆಗೆ ಬ್ರೇಕ್ ಬಿದ್ದಿತ್ತು.
 
ತಮಿಳುನಾಡಿನ ರಾಜಕೀಯದಲ್ಲಿ ಕಳೆದೆರಡು ದಿನಗಳಿಂದ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು ಜಯಲಲಿತಾ ಆಪ್ತೆ, ತಮಿಳುನಾಡು ಸರ್ಕಾರದ ಹಿರಿಯ ಸಲಹೆಗಾರರಾಗಿದ್ದ ಶೀಲಾ ಬಾಲಕೃಷ್ಣನ್ (62) ಶುಕ್ರವಾರ ತಮ್ಮ ಸ್ಥಾನವನ್ನು ತ್ಯಜಿಸಿದ್ದಾರೆ.
ಮುಖ್ಯಮಂತ್ರಿಯ ಕಾರ್ಯದರ್ಶಿಗಳಾಗಿದ್ದ, ಜಯಾ ಆವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಕೆ.ಎನ್ ವೆಂಕಟರಮಣನ್, ಎ ರಾಮಲಿಂಗಮ್ ಅವರಿಗೂ ಗೇಟ್ ಪಾಸ್ ನೀಡಲಾಗಿದೆ. ಇವರಿಬ್ಬರಿಗೆ ಸ್ಥಾನ ತ್ಯಜಿಸುವಂತೆ ಸರ್ಕಾರದ ಕಡೆಯಿಂದಲೇ ಸೂಚಿಸಲಾಗಿದೆ ಎಂದು ಮಾಹಿತಿ ದೊರೆತಿದೆ. 
 
ಈ ಮೂವರು ಅಧಿಕಾರಿಗಳ ಅನೌಪಚಾರಿಕ ನಿರ್ಗಮನವನ್ನು ಪ್ರಸ್ತುತ ಸರ್ಕಾರದ ಜತೆಗಿನ ಭಿನ್ನಾಭಿಪ್ರಾಯದ ಫಲಿತಾಂಶ ಎಂಬಂತೆ ನೋಡಲಾಗುತ್ತಿದ್ದು, ಶಶಿಕಲಾ ಪಟ್ಟಕ್ಕೇರುವ ಮುನ್ನ ಇವರೆಲ್ಲರನ್ನು ಅಧಿಕಾರದಿಂದ ಕಿತ್ತೆಸೆಯಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ದಿಡೀರ್ ರಾಜೀನಾಮೆ ಸಲ್ಲಿಸಿದ್ದರ ಹಿಂದಿದೆಯಾ ಬೇರೇ ಕಾರಣ

ತಪ್ಪೇ ಮಾಡಿಲ್ಲ ಅಂದ್ರೆ ಸೈಟು ಮರಳಿಸಿದ್ದು ಯಾಕೆ: ಸಿದ್ದರಾಮಯ್ಯಗೆ ಪ್ರಶ್ನೆ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದೂ ಇರಲಿದೆ ಮಳೆಯ ಅಬ್ಬರ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ಮುಂದಿನ ಸುದ್ದಿ
Show comments