ಸೈಬರ್ ವಂಚನೆ: ಎಚ್ಚರ ಗ್ರಾಹಕರೇ... ಎಚ್ಚರ!

Webdunia
ಮಂಗಳವಾರ, 7 ಡಿಸೆಂಬರ್ 2021 (11:19 IST)
ನವದೆಹಲಿ : ಸೈಬರ್ ವಂಚನೆ ಮಾಡಿದ್ದ ಆರೋಪದ ಮೇಲೆ ರಾಜಸ್ಥಾನದ ಇಬ್ಬರು ವ್ಯಕ್ತಿಗಳನ್ನು ನವದೆಹಲಿಯಲ್ಲಿ ಬಂಧಿಸಲಾಗಿದೆ.
ಮೆಹಂದಿ ಹಸನ್ ಅಲಿಯಾಸ್ ಹರ್ಪಾಲ್ ಸಿಂಗ್ (43) ಮತ್ತು ಎಂಡಿ ಅರ್ಬಾಜ್ ಖಾನ್ (20) ಬಂಧಿತ ಆರೋಪಿಗಳು. ಇವರು ವಿವಿಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಅಂತರಾಜ್ಯ ಗುಂಪಿನ ಸದಸ್ಯರಾಗಿದ್ದರು. ಇತ್ತೀಚೆಗಷ್ಟೇ ಗುಂಪಿನ ಮಾಸ್ಟರ್ ಮೈಂಡ್ ಆಗಿದ್ದ ಆಫ್ರಿಕನ್ ಪ್ರಜೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು.
ವಂಚಕರ ಗುಂಪು ಪ್ರತಿಷ್ಠಿತ ಕಂಪನಿಗಳನ್ನು ಗುರಿಯಾಗಿಸಿಕೊಂಡಿತ್ತು. ಕಂಪನಿಗಳ ಉನ್ನತ ಅಧಿಕಾರಿಗಳ ಇಮೇಲ್ನಂತೆ ಕಾಣುವ ರೀತಿ ನಕಲಿ ಮೇಲ್ಗಳನ್ನು ಕಳಿಸಿ ಜನರಿಗೆ ಮೊಸ ಮಾಡುತ್ತಿದ್ದರು. ಜೊತೆಗೆ ನಕಲಿ ಮೇಲ್ ಐಡಿಗಳನ್ನು ತಯಾರಿಸಿದ್ದರು. ಈ ರೀತಿ ಮಾಡಿ ಸುಮಾರು 80 ಲಕ್ಷ ರೂ. ವಂಚನೆಯನ್ನು ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 
ಆರೋಪಿಗಳು ಬ್ಯಾಂಕ್ಗೆ ನಕಲಿ ಚಾಲ್ತಿ ಖಾತೆಗಳಿಗೆ ಹಣ ವರ್ಗಾಯಿಸಲು ಸುಳ್ಳು ಪತ್ರವನ್ನು ನೀಡಿದ್ದಾರೆ. ಹಣವನ್ನು ಹಲವಾರು ಖಾತೆಗಳಿಗೆ ವರ್ಗಾಯಿಸಿ ಎಟಿಎಂನಿಂದ ಮತ್ತೆ ಹಿಂಪಡೆಯುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments