Webdunia - Bharat's app for daily news and videos

Install App

ವಾರ್ಧಾ ಎಫೆಕ್ಟ್: 12 ಸಾವು, 20,000ಕ್ಕೂ ಹೆಚ್ಚು ಮರಗಳು ಧರೆಗೆ

Webdunia
ಮಂಗಳವಾರ, 13 ಡಿಸೆಂಬರ್ 2016 (12:12 IST)
ಸೋಮವಾರ ಅಪ್ಪಳಿಸಿದ ಭೀಕರ ಚಂಡಮಾರುತಕ್ಕೆ ತಮಿಳುನಾಡು ರಾಜಧಾನಿ ಚೆನ್ನೈ ತತ್ತರಿಸಿದ್ದು ಮೃತಪಟ್ಟವರ ಸಂಖ್ಯೆ 12ಕ್ಕೇರಿದೆ. ಚೆನ್ನೈ ಮಹಾನಗರದಲ್ಲಿ 4 , ಕಾಂಚಿಪುರಂನಲ್ಲಿ 2 ಜನರು ಸಾವನ್ನಪ್ಪಿದ್ದಾರೆ. 20000 ಹೆಚ್ಚು ಮರಗಳು ಧರೆಗುರುಳಿವೆ ಎಂದು ಅಂದಾಜಿಸಲಾಗಿದೆ.
ಚೆನ್ನೈ, ಕಾಂಚೀಪುರಂ, ತಿರುವಳ್ಳೂರಿನಲ್ಲಿ ನಿನ್ನೆ ಮುಂಜಾನೆಯಿಂದ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದ್ದು ಜನರ ಪರದಾಟ ಮುಗಿಲು ಮುಟ್ಟಿದೆ. ಇನ್ನೂ 2 ದಿನ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಜನರಿಗೆ ಎಚ್ಚರದಿಂದಿರುವಂತೆ ಸೂಚಿಸಲಾಗಿದೆ. 
 
300 ನಿರಾಶ್ರಿತ ಶಿಬಿರಗಳಲ್ಲಿ 11,000 ಹೆಚ್ಚು ಜನರಿಗೆ ಆಶ್ರಯವನ್ನು ಕಲ್ಪಿಸಲಾಗಿದೆ. 
 
ಸಂಚಾರ ಅಸ್ತವ್ಯಸ್ತವಾಗಿದ್ದು 312 ರಸ್ತೆಗಳು ಬಂದ್ ಆಗಿವೆ. ಚೆನ್ನೈ ನಗರದಾದ್ಯಂತ ನೆಲಕ್ಕುರುಳಿರುವ ಭಾರಿ ಗಾತ್ರದ ಮರಗಳನ್ನು ತೆರವುಗೊಳಿಸಿ ರಸ್ತೆ ಸಂಚಾರ ಸುಗಮಗೊಳಿಸುವ ಕಾರ್ಯ ಭರದಿಂದ ಸಾಗಿದೆ. ಬಸ್, ಆಟೋ ಸಂಚಾರ ನಿಧಾನವಾಗಿ ಸುಗಮವಾಗುತ್ತಿದ್ದು ನಗರ ಸಹಜ ಸ್ಥಿತಿಗೆ ಮರಳುತ್ತಿದೆ. 
 
ಸುಮಾರು 55ಕ್ಕಿಂತ ಹೆಚ್ಚಿನ ಗುಡಿಸಲುಗಳು ನಾಶವಾಗಿದ್ದು ರೈಲು ಮತ್ತು ವಿಮಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. 
 
ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಪನೀರ್ ಸೆಲ್ವಂ ಘೋಷಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments