Webdunia - Bharat's app for daily news and videos

Install App

ಸಿಲಿಕಾನ್ ಸಿಟಿಗೂ ವಾರ್ಧಾ ಎಫೆಕ್ಟ್

Webdunia
ಸೋಮವಾರ, 12 ಡಿಸೆಂಬರ್ 2016 (12:15 IST)
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಎದ್ದಿರುವ ವಾರ್ಧಾ ಚಂಡಮಾರುತದ ಪರಿಣಾಮ ಬೆಂಗಳೂರು ನಗರಕ್ಕೂ ತಟ್ಟಲಿದೆ ಎಂದು ಹೇಳಲಾಗುತ್ತಿದೆ. ಇಂದು ಮಧ್ಯಾಹ್ನದ ಬಳಿಕ ರಾಜಧಾನಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 
ಮೋಡಗಳ ಸಾಂದ್ರತೆಯ ಪರಿಣಾಮ ಬೆಂಗಳೂರು ಉತ್ತರ ಭಾಗದಲ್ಲಿ  ಹೆಚ್ಚು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಮೇತ್ರಿ ಮಾಹಿತಿ ನೀಡಿದ್ದಾರೆ.
 
ಬೆಂಗಳೂರಲ್ಲದೇ ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಯ ಕೆಲ ಭಾಗಗಳಲ್ಲೂ ಮಳೆಯಾಗುವ ಸಂಭವವಿದೆ. 
 
ಅಂಡಮಾನ್ ನಿಕೋಬಾರ್ ದ್ವೀಪ ಸಮೂಹದಲ್ಲಿ ಭಾರಿ ಮಳೆಗೆ ಕಾರಣವಾಗಿದ್ದ ವಾರ್ಧಾ ಚಂಡಮಾರುತವೀಗ ಪೂರ್ವ ಕರಾವಳಿಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಮುಂಜಾನೆ 9.30ರ ಸುಮಾರಿಗೆ ವಾರ್ಧಾ 120 ಕೀಲೋಮೀಟರ್ ವೇಗದಲ್ಲಿ ಅಬ್ಬರಿಸುತ್ತ ಚೆನ್ನೈ ತಲುಪಿದ್ದು ನಗರದಾದ್ಯಂತ ಗಾಳಿ ಮಳೆಯಾಗುತ್ತಿದೆ. 
 
ಮಳೆಯಾಗುತ್ತಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಖಾಸಗಿ ಕಂಪನಿಗಳಿಗೂ ಸಹ ರಜೆ ಘೋಷಿಸಲಾಗಿದ್ದು, ಕೆಲವು ಕಂಪನಿಗಳು ಮನೆಯಿಂದಲೇ ಕೆಲಸ ಮಾಡುವಂತೆ ಉದ್ಯೋಗಿಗಳಿಗೆ ಸೂಚನೆ ನೀಡಿವೆ. 
 
ತಮಿಳುನಾಡಿನ ಉತ್ತರ ಭಾಗ ಮತ್ತು ದಕ್ಷಿಣ ಆಂಧ್ರದಲ್ಲಿ ವಾರ್ಧಾ ಅಪ್ಪಳಿಸುತ್ತಿದ್ದು ಮಧ್ಯಾಹ್ನದ ನಂತರ ನೆಲ್ಲೂರು ಮತ್ತು ಮಚಲೀಪಟ್ಟಣಂ ಹಾದು ಹೋಗಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments