Webdunia - Bharat's app for daily news and videos

Install App

ಸಿಲಿಕಾನ್ ಸಿಟಿಗೂ ವಾರ್ಧಾ ಎಫೆಕ್ಟ್

Webdunia
ಸೋಮವಾರ, 12 ಡಿಸೆಂಬರ್ 2016 (12:15 IST)
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಎದ್ದಿರುವ ವಾರ್ಧಾ ಚಂಡಮಾರುತದ ಪರಿಣಾಮ ಬೆಂಗಳೂರು ನಗರಕ್ಕೂ ತಟ್ಟಲಿದೆ ಎಂದು ಹೇಳಲಾಗುತ್ತಿದೆ. ಇಂದು ಮಧ್ಯಾಹ್ನದ ಬಳಿಕ ರಾಜಧಾನಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 
ಮೋಡಗಳ ಸಾಂದ್ರತೆಯ ಪರಿಣಾಮ ಬೆಂಗಳೂರು ಉತ್ತರ ಭಾಗದಲ್ಲಿ  ಹೆಚ್ಚು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಮೇತ್ರಿ ಮಾಹಿತಿ ನೀಡಿದ್ದಾರೆ.
 
ಬೆಂಗಳೂರಲ್ಲದೇ ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಯ ಕೆಲ ಭಾಗಗಳಲ್ಲೂ ಮಳೆಯಾಗುವ ಸಂಭವವಿದೆ. 
 
ಅಂಡಮಾನ್ ನಿಕೋಬಾರ್ ದ್ವೀಪ ಸಮೂಹದಲ್ಲಿ ಭಾರಿ ಮಳೆಗೆ ಕಾರಣವಾಗಿದ್ದ ವಾರ್ಧಾ ಚಂಡಮಾರುತವೀಗ ಪೂರ್ವ ಕರಾವಳಿಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಮುಂಜಾನೆ 9.30ರ ಸುಮಾರಿಗೆ ವಾರ್ಧಾ 120 ಕೀಲೋಮೀಟರ್ ವೇಗದಲ್ಲಿ ಅಬ್ಬರಿಸುತ್ತ ಚೆನ್ನೈ ತಲುಪಿದ್ದು ನಗರದಾದ್ಯಂತ ಗಾಳಿ ಮಳೆಯಾಗುತ್ತಿದೆ. 
 
ಮಳೆಯಾಗುತ್ತಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಖಾಸಗಿ ಕಂಪನಿಗಳಿಗೂ ಸಹ ರಜೆ ಘೋಷಿಸಲಾಗಿದ್ದು, ಕೆಲವು ಕಂಪನಿಗಳು ಮನೆಯಿಂದಲೇ ಕೆಲಸ ಮಾಡುವಂತೆ ಉದ್ಯೋಗಿಗಳಿಗೆ ಸೂಚನೆ ನೀಡಿವೆ. 
 
ತಮಿಳುನಾಡಿನ ಉತ್ತರ ಭಾಗ ಮತ್ತು ದಕ್ಷಿಣ ಆಂಧ್ರದಲ್ಲಿ ವಾರ್ಧಾ ಅಪ್ಪಳಿಸುತ್ತಿದ್ದು ಮಧ್ಯಾಹ್ನದ ನಂತರ ನೆಲ್ಲೂರು ಮತ್ತು ಮಚಲೀಪಟ್ಟಣಂ ಹಾದು ಹೋಗಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments