Webdunia - Bharat's app for daily news and videos

Install App

ನಿತ್ಯ 5 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸಿ : ಕರ್ನಾಟಕಕ್ಕೆ CWRC ಆದೇಶ

Webdunia
ಮಂಗಳವಾರ, 29 ಆಗಸ್ಟ್ 2023 (10:21 IST)
ನವದೆಹಲಿ : ರಾಜ್ಯದ ಕಾವೇರಿ ಅಚ್ಚುಕಟ್ಟು ಜಲಾಶಯಗಳಿಂದ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಆದೇಶ ಮಾಡಿದೆ.

ಇಂದು ವರ್ಚ್ಯುವಲ್ ಸಭೆ ನಡೆಸಿದ ಸಮಿತಿ ಅಧ್ಯಕ್ಷರು ಮಳೆ ಪ್ರಮಾಣ, ಜಲಾಶಯಗಳಿಗೆ ನೀರಿನ ಸಂಗ್ರಹದ ಬಗ್ಗೆ ಮಾಹಿತಿ ಪಡೆದರು. ಸಭೆಯಲ್ಲಿ ಮಳೆಯ ಕೊರತೆಯ ಪ್ರಮಾಣ ಸರಿಯಾಗಿ ಲೆಕ್ಕ ಹಾಕಬೇಕು. ಮುಂದಿನ ಹತ್ತು ದಿನಗಳ ಕಾಲ 24,000 ಕ್ಯೂಸೆಕ್ ನೀರು ಹರಿಸಲು ತಮಿಳುನಾಡು ಒತ್ತಾಯಿಸಿತು.  

ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕರ್ನಾಟಕ ಒಳ ಹರಿವು ಇಲ್ಲದ ಕಾರಣ ನೀರು ಬಿಡಲು ಸಾಧ್ಯವಿಲ್ಲ, ತಮಿಳುನಾಡು ನೀರಾವರಿಗೆ ನೀರು ಹರಿಸಿ ಕಾವೇರಿ ಜಲಾಶಯಗಳು ಬರಿದಾಗುತ್ತಿವೆ ಎಂದು ಆಕ್ಷೇಪ ವ್ಯಕ್ತಪಡಿಸಿತು.

ಮಧ್ಯಪ್ರವೇಶ ಮಾಡಿದ ಸಮಿತಿ ಅಧ್ಯಕ್ಷರು ತಮಿಳುನಾಡಿನ 10 ದಿನಗಳ ಕಾಲ 24,000 ಕ್ಯೂಸೆಕ್ ಹರಿಸುವ ಬೇಡಿಕೆ ಬದಲು 7,200 ಕ್ಯೂಸೆಕ್ ಹರಿಸಲು ಹೇಳಿತು. ಇದಕ್ಕೂ ಕರ್ನಾಟಕ ಒಪ್ಪದಾಗ 5,000 ಕ್ಯೂಸೆಕ್ ಹದಿನೈದು ದಿನಗಳ ಕಾಲ ಬಿಡಲು ಶಿಫಾರಸು ಮಾಡಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments