ಆಘಾತಕಾರಿ ಘಟನೆಯೊಂದರಲ್ಲಿ 15 ರೂಪಾಯಿ ಸಾಲವನ್ನು ಮರುಪಾವತಿಸದ ಹಿನ್ನೆಲೆಯಲ್ಲಿ ದಲಿತ ದಂಪತಿಗಳನ್ನು ಹರಿತವಾದ ಆಯುಧದಿಂದ ಹತ್ಯೆ ಮಾಡಿದ ಹೇಯ ಘಟನೆ ಉತ್ತರಪ್ರದೇಶದ ಮೇನ್ಪುರಿ ಜಿಲ್ಲೆಯಲ್ಲಿ ವರದಿಯಾಗಿದೆ.
ದಲಿತ ದಂಪತಿಗಳು ದಿನಸಿ ಅಂಗಡಿ ಮಾಲೀಕನಿಂದ 15 ರೂಪಾಯಿ ನಗದು ಸಾಲವನ್ನು ಪಡೆದಿದ್ದರು. ಆದರೆ, ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಅಂಗಡಿಯ ಮಾಲೀಕ ಅಶೋಕ್ ಮಿಶ್ರಾ, ಕೋಪದ ಭರದಲ್ಲಿ ದಂಪತಿಗಳನ್ನು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಿಗ್ಗೆ 6 ಗಂಟೆಗೆ ದಿನಸಿ ವಸ್ತುಗಳನ್ನು ತರಲು ದಲಿತ ದಂಪತಿಗಳು ದಿನಸಿ ಅಂಗಡಿ ಹೋದಾಗ ಮಾಲೀಕ ಅಶೋಕ್ ಹಿಂಬಾಕಿಯನ್ನು ವಾಪಸ್ ಕೊಡುವಂತೆ ಕೇಳಿದ್ದಾನೆ. ಇಬ್ಬರ ನಡುವೆ ವಾಗ್ವಾದ ವಿಕೋಪಕ್ಕೆ ಹೋದಾಗ ಅಶೋಕ್ ಹರಿತವಾದ ಆಯುಧದಿಂದ ಹತ್ಯೆ ಮಾಡಿದ್ದಾನೆ. ಆರೋಪಿ ಅಶೋಕ್ನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡ ದಂಪತಿಗಳನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಮೇನ್ಪುರಿ ಜಿಲ್ಲೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ತವರು ಕ್ಷೇತ್ರವಾಗಿದ್ದರಿಂದ ವಿಪಕ್ಷಗಳು ಸರಕಾರವನ್ನು ತರಾಟೆಗೆ ತೆಗೆದುಕೊಂಡಿವೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.